Latest

ಅನಧಿಕೃತ ಗೈರುಹಾಜರಿ: ಹೊಳಲ್ಕೆರೆ ಮತ್ತು ಹೊಸದುರ್ಗದ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯ ಮತ್ತು ಅನಧಿಕೃತ ಗೈರುಹಾಜರಿಗಾಗಿ ಜಿಲ್ಲಾ ಪಂಚಾಯಿತಿಯಿಂದ ಹೊಳಲ್ಕೆರೆ ಹಾಗೂ ಹೊಸದುರ್ಗದ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ತ್ವರಿತ ಕ್ರಮ ಜರುಗಿಸಿದ್ದಾರೆ.

ಅನಧಿಕೃತ ರಜೆಗಾಗಿ ಕ್ರಮ

ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಸೇವೆ ಸಲ್ಲಿಸುತ್ತಿದ್ದ ಟಿ.ಎನ್. ವಿನಯ್ ಕುಮಾರ್, ಯಾವುದೇ ರಜಾ ಅರ್ಜಿ ಸಲ್ಲಿಸದೆ ಅಥವಾ ಮೇಲಾಧಿಕಾರಿಗಳ ಅನುಮತಿ ಪಡೆಯದೇ ನಿರಂತರವಾಗಿ ಕಚೇರಿಗೆ ಗೈರುಹಾಜರಾಗುತ್ತಿದ್ದರು. ಇದರಿಂದ ಕಚೇರಿಯ ದೈನಂದಿನ ಕಾರ್ಯ ನಿರ್ವಹಣೆಗೆ ಅಡಚಣೆ ಉಂಟಾಗಿರುವುದಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆ ಇಲಾಖಾ ವಿಚಾರಣೆಗೆ ಒಳಪಡಿಸಿ ತಕ್ಷಣದಿಂದಲೇ ಅಮಾನತು ವಿಧಿಸಲಾಗಿದೆ.

ಹೊಸದುರ್ಗದ ಸಹಾಯಕರ ಮೇಲೂ ಕ್ರಮ

ಇದೇ ರೀತಿಯಲ್ಲಿ, ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಎನ್. ರಂಗಸ್ವಾಮಿ, 2025ರ ಮೇ 14ರಿಂದ ಜೂನ್ 10ರವರೆಗೆ ಯಾವುದೇ ಪೂರ್ವಾನುಮತಿ ಇಲ್ಲದೇ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ. ಇವರ ವಿರುದ್ದ ಹಲವು ಬಾರಿ ನೋಟಿಸ್ ನೀಡಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ತೋರಿದ್ದರಿಂದ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಶಿಫಾರಸು ಮೇರೆಗೆ ಅವರನ್ನು ಕೂಡ ಇಲಾಖಾ ವಿಚಾರಣೆಗೆ ಒಳಪಡಿಸಿ ಅಮಾನತು ಮಾಡಲಾಗಿದೆ.

ಅಮಾನತು ಅವಧಿಯ ನಿಯಮಗಳು

ಅಮಾನತು ಅವಧಿಯಲ್ಲಿ, ಅಮಾನತುಗೊಂಡ ಸಿಬ್ಬಂದಿ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ತಮ್ಮ ನಿಯೋಜಿತ ಕೇಂದ್ರವನ್ನು ತೊರೆಯಬಾರದು ಮತ್ತು ಯಾವುದೇ ರೂಪದ ಉದ್ಯೋಗದಲ್ಲಿ ತೊಡಗಿಕೊಳ್ಳುವಂತಿಲ್ಲ. ಈ ಅವಧಿಯಲ್ಲಿ ಅವರು ಸರ್ಕಾರಿ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಾಗಿರುತ್ತಾರೆ ಎಂಬುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಶಿಸ್ತು ಪ್ರಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ಈ ಕ್ರಮದೊಂದಿಗೆ, ಸರ್ಕಾರಿ ಇಲಾಖೆಗಳೆಲ್ಲರಲ್ಲೂ ಶಿಸ್ತು ಪಾಲನೆಯ ಮಹತ್ವವನ್ನು ಪುನಃ ಒತ್ತಿಹೇಳಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago