Crime

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಬಳಿ ಚಾಮರಾಜನಗರ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ 32 ಮೃತ ದುರ್ದೈವಿ.
ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು. ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಚಾಮರಾಜನಗರ ಕಡೆಗೆ ಅತಿ ವೇಗವಾಗಿ ಬಂದ ಕಾರಿನ ಚಾಲಕ ರಸ್ತೆಯ ಬದಿಯಲ್ಲಿ ನಿಂತಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರಿಗೂ ಸಹ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಮಂಜುಳಾ ತನ್ನ ಮಕ್ಕಳನ್ನು ಬಚಾವ್ ಮಾಡಿದ್ದಾಳೆ. ಕಾರಿನ ಚಕ್ರ ಹೊಟ್ಟೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮಂಜುಳಾ ಸಾವನ್ನಪ್ಪಿದ್ದಾಳೆ. ಲಕ್ಷ್ಮಣ, ಸಿಂಧು, ಶಿವ ಮಲ್ಲು, ನೇಹರ್, ರಾಜಪ್ಪ ಹಾಗೂ ಮೃತ ಮಹಿಳೆಯ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಅಪರಿಚಿತ ವಾಹನದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ನಂತರ ಕುಟುಂಬಸ್ಥರಿಗೆ ಒಪ್ಪಿಸಲಾಯಿತು.
ಮೃತ ಮಹಿಳೆಯು ಅಪಘಾತಕ್ಕೂ ಮುನ್ನ ಬ್ಯಾಂಕಿಗೆ ಖಾತೆ ತೆರೆಯಲು ಹೋಗಿದ್ದ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದ್ದು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕವಲಂದೆ ಗ್ರಾಮದ ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ ರಸ್ತೆಗೆ ಬ್ಯಾರಿ ಕೇಡ್ , ಸಿಗ್ನಲ್ ದೀಪ, ರಸ್ತೆ ಉಬ್ಬು ಮತ್ತು ನಾಮಫಲಕಗಳನ್ನು ಈ ಕೂಡಲೇ ಅಳವಡಿಸಿ ಅಪಘಾತಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

7 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

7 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

7 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

8 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

8 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

13 hours ago