ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಬಳಿ ಚಾಮರಾಜನಗರ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ 32 ಮೃತ ದುರ್ದೈವಿ.
ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು. ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಚಾಮರಾಜನಗರ ಕಡೆಗೆ ಅತಿ ವೇಗವಾಗಿ ಬಂದ ಕಾರಿನ ಚಾಲಕ ರಸ್ತೆಯ ಬದಿಯಲ್ಲಿ ನಿಂತಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರಿಗೂ ಸಹ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಮಂಜುಳಾ ತನ್ನ ಮಕ್ಕಳನ್ನು ಬಚಾವ್ ಮಾಡಿದ್ದಾಳೆ. ಕಾರಿನ ಚಕ್ರ ಹೊಟ್ಟೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮಂಜುಳಾ ಸಾವನ್ನಪ್ಪಿದ್ದಾಳೆ. ಲಕ್ಷ್ಮಣ, ಸಿಂಧು, ಶಿವ ಮಲ್ಲು, ನೇಹರ್, ರಾಜಪ್ಪ ಹಾಗೂ ಮೃತ ಮಹಿಳೆಯ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಅಪರಿಚಿತ ವಾಹನದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ನಂತರ ಕುಟುಂಬಸ್ಥರಿಗೆ ಒಪ್ಪಿಸಲಾಯಿತು.
ಮೃತ ಮಹಿಳೆಯು ಅಪಘಾತಕ್ಕೂ ಮುನ್ನ ಬ್ಯಾಂಕಿಗೆ ಖಾತೆ ತೆರೆಯಲು ಹೋಗಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದ್ದು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕವಲಂದೆ ಗ್ರಾಮದ ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ ರಸ್ತೆಗೆ ಬ್ಯಾರಿ ಕೇಡ್ , ಸಿಗ್ನಲ್ ದೀಪ, ರಸ್ತೆ ಉಬ್ಬು ಮತ್ತು ನಾಮಫಲಕಗಳನ್ನು ಈ ಕೂಡಲೇ ಅಳವಡಿಸಿ ಅಪಘಾತಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮೋಹನ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…