Crime

ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರದ ಬಳಿಕ ಬೆಂಕಿ ಹಚ್ಚಿ ಹತ್ಯೆ..!

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಭೀಕರ ಘಟನೆ ನಡೆದಿದೆ. ಸುಮಾರು 40 ವರ್ಷ ವಯಸ್ಸಿನ ಅನಾಮಿಕ ಮಹಿಳೆಯ ಶವ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಹಿಳೆಯ ಮೇಲೆ ಮೊದಲಿಗೆ ಅತ್ಯಾಚಾರ ಎಸಗಿದ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆಯೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೆಟ್ರೋಲ್ ಬಳಕೆಯ ಸುಳಿವುಗಳು ದೊರೆತಿದ್ದು, ಈ ನಿಟ್ಟಿನಲ್ಲಿ ತನಿಖೆ ಆರಂಭಿಸಲಾಗಿದೆ.

ಘಟನಾ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ ಹಾಗೂ ಪಿಎಸ್‌ಐ ತಿರುಮಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ದಾರುಣ ಘಟನೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಗುರುತು ಪತ್ತೆಹಚ್ಚುವ ಮತ್ತು ಅಪರಾಧಿಗಳನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸ್ಥಳೀಯರಲ್ಲಿ ಆತಂಕ ಮೂಡಿಸಿರುವ ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

nazeer ahamad

Recent Posts

ದುಬೈದಿಂದ ನಕಲಿ ಸಿಗರೇಟ್ ಸಾಗಾಟ: ಬೆಂಗಳೂರಿನಲ್ಲಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಬಂಧನ

ಬೆಂಗಳೂರು ನಗರದಲ್ಲಿ ನಕಲಿ ಸಿಗರೇಟು ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ದುಬೈನಿಂದ ಅಕ್ರಮವಾಗಿ ಸಿಗರೇಟು ತರಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ…

2 hours ago

ಒಂಟಿ ಮಹಿಳೆಯರನ್ನೇ ಗುರಿ ಮಾಡಿದ ಸರಗಳ್ಳರು ಸೆರೆ, 9 ಲಕ್ಷ ರೂ. ಮೌಲ್ಯದ ವಸ್ತುಗಳು ವಶ

ಕೋಲಾರ ಜಿಲ್ಲೆಯಲ್ಲಿ ಒಂಟಿ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿ, ಸುಮಾರು 9 ಲಕ್ಷ ರೂ. ಮೌಲ್ಯದ…

3 hours ago

ತಮ್ಮನಿಂದಲೇ ಬೆಂಕಿಗೆ ಆಹುತಿಯಾದ ಅಣ್ಣ – ಕೋಡಿಂಬಾಳದಲ್ಲಿ ಭಯಾನಕ ಘಟನೆ

ಕಡಬ ತಾಲೂಕಿನ ಕೋಡಿಂಬಾಳದ ಕೋರಿಯಾರ್ ಸಮೀಪದ ರೈಲ್ವೇ ಟ್ರ್ಯಾಕ್ ಬಳಿ ಜೂನ್ 8ರಂದು ಮನಭಾರ ಹಾಕುವಂತಹ ದಾರుణ ಘಟನೆಯೊಂದು ನಡೆದಿದ್ದು,…

3 hours ago

ಆಸ್ಪತ್ರೆಯ ಐಸಿಯುವಿನಲ್ಲಿ ಹೃದಯವಿದ್ರಾವಕ ಘಟನೆ: ನರ್ಸಿಂಗ್ ಸಿಬ್ಬಂದಿಯಿಂದ ರೋಗಿಗೆ ಲೈಂಗಿಕ ದೌರ್ಜನ್ಯ

ರಾಜಸ್ಥಾನದ ರಾಮ್‌ಗಢ ಪ್ರದೇಶದಲ್ಲಿರುವ ಇಎಸ್‌ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ 32 ವರ್ಷದ ಮಹಿಳೆಯೊಬ್ಬರು, ಚಿಕಿತ್ಸೆಗಾಗಿ ಐಸಿಯುವಿನಲ್ಲಿ ಇದ್ದ ವೇಳೆ,…

7 hours ago

ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಬೈಕ್‌ನಲ್ಲಿ ಹೋದ ಜೋಡಿಯನ್ನು ತಡೆದು ಪ್ರಶ್ನಿಸಿದ ಯುವಕರು

ಬೆಂಗಳೂರು ಮತ್ತು ಅದರ ಸುತ್ತಮುತ್ತ ನೈತಿಕ ಪೊಲೀಸ್ ಗಿರಿಯ ಘಟನೆಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ರಾಮನಗರದಲ್ಲಿ ಮತ್ತೊಂದು ಇಂತಹ ಘಟನೆ ನಡೆದಿದೆ.…

7 hours ago

ಆಯರಹಳ್ಳಿ ಹೊಳೆಯಲ್ಲಿ ತಲೆಹರಿತ ಶವಭಾಗ ಪತ್ತೆ – ಮೈಸೂರು ಜಿಲ್ಲೆಯಲ್ಲಿ ರಹಸ್ಯಮಯ ಮರಣದ ವಿಚಾರಣೆ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ…

1 day ago