Latest

ಐದು ಹುಲಿಗಳ ಅಸಹಜ ಸಾವು:ಎಂ.ಎಂ.ಹಿಲ್ಸ್ ವನ್ಯಜೀವಿ ವಿಭಾಗದ ಡಿಸಿಎಫ್ ಅಮಾನತು

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದ ಐದು ಹುಲಿಗಳ ಅಸಹಜ ಸಾವು ಪ್ರಕರಣ ಸಂಬಂಧ ವನ್ಯಜೀವಿ ಸಂರಕ್ಷಣೆಯಲ್ಲಿ ಗಂಭೀರವಾದ ಕರ್ತವ್ಯ ಲೋಪ ನಡೆದಿದೆ ಎಂದು ಅಧಿಕಾರದ ವರದಿಗಳು ದೃಢಪಡಿಸಿದ್ದ ಬೆನ್ನಲ್ಲೇ, ಎಂ.ಎಂ.ಹಿಲ್ಸ್ ವನ್ಯಜೀವಿ ವಿಭಾಗದ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (DCF) ವೈ.ಚಕ್ರಪಾಣಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ವನ್ಯಜೀವಿ ಇಲಾಖೆಯ ಉನ್ನತ ಮಟ್ಟದ ತನಿಖಾ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ನೀಡಿದ ಶಿಫಾರಸಿನ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಮಾನತಿನ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಜಾರಿಗೊಂಡಿದ್ದು, ಇನ್ನಷ್ಟೆ ಇಲಾಖಾ ವಿಚಾರಣೆಯು ನಡೆಯಬೇಕಿದೆ.

ವೇತನ ವಿಳಂಬವೇ ಕಾರಣ…

ತನಿಖಾ ವರದಿಯ ಪ್ರಕಾರ, ಈ ವರ್ಷ ಮಾರ್ಚ್‌ನಿಂದ ಮೇವರೆಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ಅಸಮರ್ಪಕತೆ ಕಂಡುಬಂದಿದೆ. ವೇತನವಿಲ್ಲದೇ ನಿರ್ಗತಿಕರಾಗಿದ್ದ ವಾಚರ್‌ಗಳು ಜೂನ್ 23ರಂದು ಕೊಳ್ಳೇಗಾಲದ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೂ ದಾಖಲಾಗಿದೆ.

ಈ ಸಂದರ್ಭದಲ್ಲಿ ಗುತ್ತಿಗೆದಾರ ಸಂಸ್ಥೆ ವೇತನ ಪಾವತಿಸಲು ವಿಳಂಬ ಮಾಡಿದರೂ, ಡಿಸಿಎಫ್ ಚಕ್ರಪಾಣಿ ಅವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ವೇತನ ಪಾವತಿಗೆ ಅಗತ್ಯ ಅನುದಾನ ಇದ್ದರೂ ಮಾರ್ಚ್ ತಿಂಗಳ ವೇತನವೇ ನೀಡಲಾಗಿರಲಿಲ್ಲ. ಏಪ್ರಿಲ್ ಮತ್ತು ಮೇ ತಿಂಗಳ ವೇತನಕ್ಕಾಗಿ ಖಜಾನೆಗೆ ಬಿಲ್ ಸಲ್ಲಿಸಲು ವಿಳಂಬ ಮಾಡಲಾಗಿದೆ ಎಂಬುದು ತನಿಖಾ ವರದಿಯಲ್ಲಿದೆ.

ನಿಯಮ ಉಲ್ಲಂಘನೆ ಆರೋಪ

ಅಮಾನತುಗೊಂಡ ಅಧಿಕಾರಿಯಾದ ವೈ.ಚಕ್ರಪಾಣಿ ಅವರಿಗೆ ಈಗಿನಿಂದ ಕೇಂದ್ರಸ್ಥಾನ ತೊರೆಯುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಯಾವುದೇ ಸಂತರ ಇಲ್ಲದೆ ಸ್ಥಳ ಬದಲಾಯಿಸಿದರೆ ಮತ್ತಷ್ಟು ಕ್ರಮ ಎದುರಾಗುವ ಸಾಧ್ಯತೆ ಇದೆ.

ಈ ಮೂಲಕ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ನಡೆದ ಪ್ರಾಣಿಹತ್ಯೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಪರವಾಗಿರುವ ನಿರ್ಲಕ್ಷ್ಯವೂ ಹತ್ತಿರದಿಂದ ಪರಿಶೀಲನೆಗೆ ಒಳಪಟ್ಟಿದೆ. ಮುಂದಿನ ದಿನಗಳಲ್ಲಿ ಈ ಸಂಬಂಧ ಇನ್ನಷ್ಟು ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬಹುದೆಂಬ ಸೂಚನೆ ಸರ್ಕಾರದೊಳಗಿನಿಂದ ವ್ಯಕ್ತವಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago