Latest

ಚಾಮರಾಜನಗರದಲ್ಲಿ ಚಿರತೆಯ ಅಸಹಜ ಸಾವು: ವಿಷಪ್ರಾಶನೆ ಶಂಕೆ, ವ್ಯಕ್ತಿಯೋರ್ವ ವಶದಲ್ಲಿ

ಚಾಮರಾಜನಗರ: ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಹರವೆ ಹೋಬಳಿಯ ತೆರಕಣಾಂಬಿ ಗ್ರಾಮದ ಸಮೀಪದ ಕೊತ್ತಲವಾಡಿಯ ಕರಿಕಲ್ಲು ಕ್ವಾರಿಯಲ್ಲಿ ಚಿರತೆಯೊಬ್ಬದ ಶವ ಪತ್ತೆಯಾಗಿರುವ ಪ್ರಕರಣ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯ ಪ್ರಾಥಮಿಕ ತನಿಖೆ ಪ್ರಕಾರ, ಈ ಚಿರತೆ ವಿಷ ಸೇವನೆಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ.

ಚಿರತೆಯ ಶವದ ಬಳಿಯಲ್ಲಿ ನಾಯಿ ಮತ್ತು ಒಂದು ಕುರುವಿನ ಶವಗಳು ಕೂಡ ಪತ್ತೆಯಾಗಿದ್ದು, ಈ ಮೂರು ಪ್ರಾಣಿಗಳೂ ಏಕಕಾಲಕ್ಕೆ ಅಸಹಜವಾಗಿ ಸಾವಿಗೀಡಾಗಿರುವುದರಿಂದ ವಿಷ ನೀಡಿರುವ ಶಂಕೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ, ಘಟನೆಗೆ ಸಂಬಂಧಿಸಿ ಸ್ಥಳೀಯ ಜಾನುವಾರು ಸಾಕಣೆದಾರನೊಬ್ಬನನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಚಾಮರಾಜನಗರ ಸಿಸಿಎಫ್ ಹೀರಾಲಾಲ್ ಅವರ ನೇತೃತ್ವದಲ್ಲಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದ್ದು, ತನಿಖೆ ತೀವ್ರಗೊಳಿಸಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಮೊದಲು ಪ್ರಾಣಿ ವೈದ್ಯಕೀಯ ಪರೀಕ್ಷೆ (ನ್ಯಾಕ್ರೋಪಿ) ನಡೆಸಿ ಸಾವಿಗೆ ಕಾರಣ ನಿಖರವಾಗಿ ತಿಳಿದುಬರುವ ನಿರೀಕ್ಷೆ ಇದೆ.

ಇದಕ್ಕೂ ಮುನ್ನ ಇದೇ ಜಿಲ್ಲೆಯಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಐದು ಹುಲಿಗಳು ವಿಷ ಸೇವನೆಗೊಳಗಾಗಿ ಸಾವಿಗೀಡಾಗಿದ್ದವು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿತ್ತು. ಅಲ್ಲದೇ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 19 ಕೋತಿಗಳೂ ವಿಷ ಹಾಕಿ ಕೊಲ್ಲಲ್ಪಟ್ಟ ಘಟನೆ ಕೂಡ ಸಂಭವಿಸಿತ್ತು.

ಈ ಕ್ರಮಬದ್ಧ ಹತ್ಯೆಗಳ ನಡುವೆಯೇ ಈಗ ಚಿರತೆಯ ಸಾವಿನ ಪ್ರಕರಣ ಕೂಡ ಬೆಳಕಿಗೆ ಬಂದಿದ್ದು, ವನ್ಯಜೀವಿಗಳ ರಕ್ಷಣೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ನಿಯಮಿತ ಪಟ್ರೋಲಿಂಗ್‌, ಜನಜಾಗೃತಿ ಮತ್ತು ಗಟ್ಟಿಯಾದ ಕಾನೂನು ಜಾರಿಗೆ ಒತ್ತಾಯಿಸುತ್ತಿರುವ ಪ್ರಾಣಿ ಪ್ರಿಯರು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago