Latest

ಚಾಮರಾಜನಗರದಲ್ಲಿ ಚಿರತೆಯ ಅಸಹಜ ಸಾವು: ವಿಷಪ್ರಾಶನೆ ಶಂಕೆ, ವ್ಯಕ್ತಿಯೋರ್ವ ವಶದಲ್ಲಿ

ಚಾಮರಾಜನಗರ: ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಹರವೆ ಹೋಬಳಿಯ ತೆರಕಣಾಂಬಿ ಗ್ರಾಮದ ಸಮೀಪದ ಕೊತ್ತಲವಾಡಿಯ ಕರಿಕಲ್ಲು ಕ್ವಾರಿಯಲ್ಲಿ ಚಿರತೆಯೊಬ್ಬದ ಶವ ಪತ್ತೆಯಾಗಿರುವ ಪ್ರಕರಣ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯ ಪ್ರಾಥಮಿಕ ತನಿಖೆ ಪ್ರಕಾರ, ಈ ಚಿರತೆ ವಿಷ ಸೇವನೆಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ.

ಚಿರತೆಯ ಶವದ ಬಳಿಯಲ್ಲಿ ನಾಯಿ ಮತ್ತು ಒಂದು ಕುರುವಿನ ಶವಗಳು ಕೂಡ ಪತ್ತೆಯಾಗಿದ್ದು, ಈ ಮೂರು ಪ್ರಾಣಿಗಳೂ ಏಕಕಾಲಕ್ಕೆ ಅಸಹಜವಾಗಿ ಸಾವಿಗೀಡಾಗಿರುವುದರಿಂದ ವಿಷ ನೀಡಿರುವ ಶಂಕೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ, ಘಟನೆಗೆ ಸಂಬಂಧಿಸಿ ಸ್ಥಳೀಯ ಜಾನುವಾರು ಸಾಕಣೆದಾರನೊಬ್ಬನನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಚಾಮರಾಜನಗರ ಸಿಸಿಎಫ್ ಹೀರಾಲಾಲ್ ಅವರ ನೇತೃತ್ವದಲ್ಲಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದ್ದು, ತನಿಖೆ ತೀವ್ರಗೊಳಿಸಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಮೊದಲು ಪ್ರಾಣಿ ವೈದ್ಯಕೀಯ ಪರೀಕ್ಷೆ (ನ್ಯಾಕ್ರೋಪಿ) ನಡೆಸಿ ಸಾವಿಗೆ ಕಾರಣ ನಿಖರವಾಗಿ ತಿಳಿದುಬರುವ ನಿರೀಕ್ಷೆ ಇದೆ.

ಇದಕ್ಕೂ ಮುನ್ನ ಇದೇ ಜಿಲ್ಲೆಯಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಐದು ಹುಲಿಗಳು ವಿಷ ಸೇವನೆಗೊಳಗಾಗಿ ಸಾವಿಗೀಡಾಗಿದ್ದವು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿತ್ತು. ಅಲ್ಲದೇ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 19 ಕೋತಿಗಳೂ ವಿಷ ಹಾಕಿ ಕೊಲ್ಲಲ್ಪಟ್ಟ ಘಟನೆ ಕೂಡ ಸಂಭವಿಸಿತ್ತು.

ಈ ಕ್ರಮಬದ್ಧ ಹತ್ಯೆಗಳ ನಡುವೆಯೇ ಈಗ ಚಿರತೆಯ ಸಾವಿನ ಪ್ರಕರಣ ಕೂಡ ಬೆಳಕಿಗೆ ಬಂದಿದ್ದು, ವನ್ಯಜೀವಿಗಳ ರಕ್ಷಣೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ನಿಯಮಿತ ಪಟ್ರೋಲಿಂಗ್‌, ಜನಜಾಗೃತಿ ಮತ್ತು ಗಟ್ಟಿಯಾದ ಕಾನೂನು ಜಾರಿಗೆ ಒತ್ತಾಯಿಸುತ್ತಿರುವ ಪ್ರಾಣಿ ಪ್ರಿಯರು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago