National

ಪಾಕಿಸ್ತಾನದ ಐಎಸ್‌ಐಗೆ ಗುಪ್ತ ಮಾಹಿತಿ ಸೋರಿಕೆ: ಯುಪಿ ಎಟಿಎಸ್ದಿಂದ ಶಸ್ತ್ರಾಸ್ತ್ರ ಕಾರ್ಖಾನೆ ಉದ್ಯೋಗಿ ಬಂಧನ

ಉತ್ತರ ಪ್ರದೇಶದ ಲಕ್ನೋದಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಿದೆ. ಫಿರೋಜಾಬಾದ್‌ನ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರವೀಂದ್ರ ಕುಮಾರ್ ಬಂಧಿತ ಆರೋಪಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೌಪ್ಯ ಮಾಹಿತಿಯ ಸೋರಿಕೆ:

  • ಯುಪಿ ಎಟಿಎಸ್ ಮುಖ್ಯಸ್ಥ ನೀಲಬ್ಜಾ ಚೌಧರಿ ಶುಕ್ರವಾರ ಈ ಬಗ್ಗೆ ಮಾಹಿತಿ ನೀಡಿದ್ದು,
  • ರವೀಂದ್ರ ಕುಮಾರ್ ಗಂಗಾಯಣ ಬಾಹ್ಯಾಕಾಶ ಯೋಜನೆ, ಮಿಲಿಟರಿ ಲಾಜಿಸ್ಟಿಕ್ಸ್ ಮತ್ತು ಡ್ರೋನ್‌ಗಳ ಕುರಿತು ಗುಪ್ತ ಮಾಹಿತಿ ಹಂಚಿಕೊಂಡಿದ್ದಾನೆ.
  • ಈ ಸಂಬಂಧ ಅವನ ಸಹಚರನನ್ನೂ ಬಂಧಿಸಲಾಗಿದೆ.

ಐಎಸ್‌ಐ ಏಜೆಂಟ್ ‘ನೇಹಾ ಶರ್ಮಾ’ ಮೂಲಕ ಬೇಹುಗಾರಿಕೆ

  • ‘ನೇಹಾ ಶರ್ಮಾ’ ಎಂಬ ಕೋಡ್ ನೇಮ್ ಹೊಂದಿದ್ದ ಐಎಸ್‌ಐ ಏಜೆಂಟ್‌ಗೆ ರವೀಂದ್ರ ಕುಮಾರ್ ಮಾಹಿತಿ ಒದಗಿಸುತ್ತಿದ್ದ ಎಂದು ಯುಪಿ ಎಟಿಎಸ್ ಮತ್ತು ಇತರೆ ಕಾನೂನು ಸಂಸ್ಥೆಗಳು ಪತ್ತೆ ಹಚ್ಚಿದ್ದವು.
  • ಈ ಹಿನ್ನೆಲೆಯಲ್ಲಿ ಆಗ್ರಾ ಘಟಕ ರವೀಂದ್ರ ಕುಮಾರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು.
  • ವಾಟ್ಸಾಪ್ ಮತ್ತು ಫೇಸ್‌ಬುಕ್ ಮೂಲಕ ‘ನೇಹಾ’ ಹೆಸರಿನ ಹ್ಯಾಂಡ್ಲರ್‌ ಜೊತೆ ಸಂಪರ್ಕದಲ್ಲಿದ್ದು, ಮಿಲಿಟರಿ ಮಾಹಿತಿಗಳನ್ನು ಹಂಚಿಕೊಂಡಿದ್ದನು.

ಸೂಕ್ಷ್ಮ ಮಾಹಿತಿಯ ಲೋಪ:

  • ರವೀಂದ್ರ ಕುಮಾರ್ ತನ್ನ ಮೊಬೈಲ್‌ನಲ್ಲಿ ಈ ಹ್ಯಾಂಡ್ಲರ್‌ನ ನಂಬರ್‌ ಅನ್ನು ‘ಚಂದನ್ ಸ್ಟೋರ್ ಕೀಪರ್ 2’ ಎಂದು ಸೇವ್ ಮಾಡಿದ್ದ.
  • ಶಸ್ತ್ರಾಸ್ತ್ರ ಕಾರ್ಖಾನೆಯ ದೈನಂದಿನ ಉತ್ಪಾದನಾ ವರದಿಗಳು ಸೇರಿದಂತೆ ಹಲವು ಮಹತ್ವದ ಮಾಹಿತಿಗಳನ್ನು ಸೋರಿಕೆ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಯುಪಿ ಎಟಿಎಸ್, ಹೆಚ್ಚಿನ ತನಿಖೆ ಕೈಗೊಂಡಿದೆ. ಅಪಾರ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ಹರಿದುಹೋಗುವ ಸಾಧ್ಯತೆ ಇರುವುದರಿಂದ, ಆರೋಪಿಯ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago