Latest

ಜೂನ್ 14 ಒಳಗೆ ನಿಮ್ಮ ಆಧಾರ್ ಉಚಿತವಾಗಿ ಅಪ್ಡೇಟ್ ಮಾಡ್ಕೊಳ್ಳಿ; ಇಲ್ಲವಾದ್ರೆ ಶುಲ್ಕ ನೀಡಬೇಕಾಗುತ್ತೆ!

ಇದೀಗ ಜನರು ತಮ್ಮ ಆಧಾರ್ ಕಾರ್ಡ್ ಆನ್ಲೈನ್ನಲ್ಲಿ ದಾಖಲೆಗಳನ್ನು ನವೀಕರಿಸಲು ಉಚಿತವಾಗಿ ಆಯ್ಕೆ ಮಾಡಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿದೆ. ಮುಂದಿನ 3 ತಿಂಗಳ ಕಾಲ MyAadhaar ಪೋರ್ಟಲ್ನಲ್ಲಿ ಉಚಿತ ಡಾಕ್ಯುಮೆಂಟ್ ಅಪ್ಡೇಟ್ ಸೌಲಭ್ಯವನ್ನು ಬಳಕೆದಾರರು ಪಡೆದುಕೊಳ್ಳಬಹುದಾದ ಡಿಜಿಟಲ್ ಇಂಡಿಯಾ ಉಪಕ್ರಮದ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ದೊಡ್ಡ ವಿಷಯವೆಂದರೆ ನವೀಕರಣಕ್ಕಾಗಿ ನೀವು ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ. ಅಂದರೆ ನಿಮ್ಮ ಆಧಾರ್ ಅನ್ನು ಉಚಿತವಾಗಿ ನವೀಕರಿಸಲಾಗುತ್ತದೆ. ಈ ಹಿಂದೆ ಪ್ರತಿಯೊಂದು ಅಪ್ಡೇಟ್ಗಳಿಗಾಗಿ 25 ರೂಪಾಯಿ ಶುಲ್ಕ ವಿಧಿಸಲಾಗುತ್ತಿತ್ತು ಆದರೆ ಸದ್ಯಕ್ಕೆ ಇದು ಉಚಿತ.
10 ವರ್ಷ ಹಳೆಯ ಕಾರ್ಡ್ ಹೊಂದಿರುವವರಿಗೆ ಅವಶ್ಯಕ: ನಿಮ್ಮ ಆಧಾರ್ ಕಾರ್ಡ್ 10 ವರ್ಷ ಹಳೆಯದಾಗಿದ್ದರೆ ನೀವು ಅದನ್ನು ಕಡ್ಡಾಯವಾಗಿ ನವೀಕರಿಸಬೇಕಾಗುತ್ತದೆ. ನವೀಕರಣದ ಪ್ರಕ್ರಿಯೆಯನ್ನು UIDAI ಒಂದು ನಿರ್ದಿಷ್ಟ ಸಮಯದವರೆಗೆ ಉಚಿತವಾಗಿ ಇರಿಸಿದೆ. ಅಂದರೆ ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಉಚಿತವಾಗಿ ನವೀಕರಿಸಬಹುದು. ಈ ಸೌಲಭ್ಯವು ಸೀಮಿತ ಅವಧಿಗೆ ಇದ್ದರೂ. 14ನೇ ಜೂನ್ 2023 ಒಳಗೆ ನಿಮ್ಮ ಆಧಾರ್ ಅನ್ನು ನೀವು ಉಚಿತವಾಗಿ ನವೀಕರಿಸಬಹುದು.

ಮೊದಲಿಗೆ ಮೈ ಆಧಾರ್ ಪೋರ್ಟಲ್ಗೆ ಭೇಟಿ ನೀಡುವ ಮೂಲಕ ಭಾರತದ ಯಾರಾದರೂ ಉಚಿತವಾಗಿ ದಾಖಲೆಗಳನ್ನು ನವೀಕರಿಸಬಹುದು ಎಂದು ಯುಐಡಿಎಐ ಜನರಿಗೆ ಮನವಿ ಮಾಡಿದೆ.ಡಾಕ್ಯುಮೆಂಟ್ಗಳನ್ನು ನವೀಕರಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.ಆದರೆ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ದಾಖಲೆಯನ್ನು ನವೀಕರಿಸುವಾಗ ರೂ. 50 ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago