ಮಂಗಳೂರು: ಮಾಟ ಮಂತ್ರ ಮಾಡಲಾಗಿದೆ ಎಂಬ ಭಯ ಮೂಡಿಸಿ, ಅದರಿಂದ ಪರಿಹಾರ ನೀಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಲ್ಲದೇ, ಲಕ್ಷ ರೂಪಾಯಿಗೂ ಹೆಚ್ಚು ಹಣ ವಂಚಿಸಿದ ಆರೋಪದ ಮೇಲೆ ಮಂಗಳೂರು ಮಹಿಳಾ ಠಾಣೆ ಪೊಲೀಸರು ಗುರುವಾಯನಕೆರೆಯ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಬಂಧಿಸಿದ್ದಾರೆ.
2022ರಲ್ಲಿ ಮನೋವೈಕಲ್ಯದಿಂದ ಬಳಲುತ್ತಿದ್ದ ಮಹಿಳೆ, ತಮ್ಮ ಅಕ್ಕನ ಗಂಡನ ಸಲಹೆಯಂತೆ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಬಳಿ ಹೋಗಿದ್ದರು. ಕರೀಮ್, “ನಿಮ್ಮ ಮೇಲೆ ಯಾರೋ ಮಾಟ ಮಂತ್ರ ಮಾಡಿದ್ದಾರೆ. ಅದನ್ನು ನಿವಾರಣೆ ಮಾಡಬೇಕು” ಎಂದು ಹೆದರಿಸಿ, ತನ್ನ ಬಳಿ ಚಿಕಿತ್ಸೆ ಪಡೆಯುವಂತೆ ಹೇಳಿದ್ದ.
ಮಾಹಿತಿಯಂತೆ, ಪರಿಹಾರದ ನೆಪದಲ್ಲಿ ಕರೀಮ್ ಆ ಮಹಿಳೆಯನ್ನು ಮರುಮರು ತನ್ನ ಮನೆಗೆ ಬರುವಂತೆ ಮಾಡಿದ. ಪ್ರಾರಂಭದಲ್ಲಿ ಕುರ್ಆನ್ ಓದುತ್ತಿದ್ದ ಅಬ್ದುಲ್, ಸಮಯಾವಕಾಶ ನೋಡಿಕೊಂಡು ಮಹಿಳೆಗೆ ದೈಹಿಕ ಕಿರುಕುಳ ನೀಡಿದ. 2022ರ ಫೆಬ್ರವರಿ 10ರಂದು ಮಹಿಳೆ ಒಬ್ಬಳೇ ಕರೀಮ್ ನ ಮನೆಗೆ ಹೋದ ಸಂದರ್ಭದಲ್ಲಿ, ಕರೀಮ್ ಕುರ್ಆನ್ ಓದಿ ಆಕೆಯ ಮೇಲೆ ಕೈ ಹಾಕಿ ಅವಾಚ್ಯವಾಗಿ ವರ್ತಿಸಿದ್ದಾನೆ.
ಇಲ್ಲದೆ, ಚಿಕಿತ್ಸೆಗಾಗಿ ಹಣ ಬೇಕೆಂದು ಹೇಳಿ, ಹಂತ ಹಂತವಾಗಿ ಆಕೆಯಿಂದ 1 ಲಕ್ಷಕ್ಕೂ ಹೆಚ್ಚು ರೂಪಾಯಿ ಪಡೆದುಕೊಂಡಿರುವುದಾಗಿ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದೇ ಶೈಲಿಯಲ್ಲಿ ಕರೀಮ್ ಹಲವಾರು ಮಂದಿಗೆ ಮಾಟ ಮಂತ್ರ ಪರಿಹಾರದ ನಂಬಿಕೆ ಮೂಡಿಸಿ ಹಣ ಪಡೆದು ಮೋಸಮಾಡಿರುವ ಬಗ್ಗೆವೂ ಮಾಹಿತಿ ಲಭಿಸಿವೆ. ಮೌಢ್ಯ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು, ಆತ ಹಲವರ ಭಾವನೆಗಳ ಜೊತೆ ಆಟವಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…