ಕುಂದಗೋಳ: ಜಾನುವಾರುಗಳಿಗೆ ಕಂಡು ಬರುವ ಕಾಲು ಬಾಯಿ ರೋಗದ ನಿಯಂತ್ರಣಕ್ಕಾಗಿ ಲಸಿಕೆ ಲಭ್ಯವಿದ್ದು, ಪಶುಪಾಲಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು.
ಅವರು ಕುಂದಗೋಳ ಪಟ್ಟಣದ ಪಶುಪಾಲನಾ ಪಶುವೈದ್ಯಕೀಯ ಸೇವ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಇವರ ಸಹಯೋಗದಲ್ಲಿ ಕಾಲುಬಾಯಿ ಲಸಿಕಾ ಅಭಿಯಾನವನ್ನು ಎತ್ತುಗಳಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಎಲ್ಲೆಡೆ ಜಾನುವಾರುಗಳಿಗೆ ಕಾಲುಬಾಯಿ ರೋಗ ಬಾದಿಸಿದ್ದು ಅವುಗಳ ನಿಯಂತ್ರಣಕ್ಕೆ ಪಶುಪಾಲಕರು ಲಸಿಕೆ ಸದುಪಯೋಗ ಪಡೆದುಕೊಳ್ಳಬೇಕು. ಜಾನುವಾರಗಳು ರೈತರ ಜಿವಾಳಾಗಿದ್ದು ಅವುಗಳ ರಕ್ಷಣೆಗೆ ರೈತರು ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.
ನಂತರ ತಾಲೂಕಿನ ಪಶು ವೈದ್ಯಾಧಿಕಾರಿ ಮಾತನಾಡಿ ದಿನಾಂಕ 07/11/2022 ರಿಂದ 07/12/2022 ರವರಿಗೆ ಈ ಅಭಿಯಾನ ನಡೆಯಲಿದ್ದು, ಪ್ರತಿಯೊಂದು ಎತ್ತು, ಹೋರಿ, ಹಸು ಎಮ್ಮೆ ಜಾನುವಾರುಗಳಿಗೆ ಲಸಿಕೆ ನಿಡುತ್ತಿದ್ದೆವೆ. ಈಗಾಗಲೇ 19 ತಂಡಗಳೊಂದಿಗೆ 38 ಲಸಿಕಾದಾರರು ಇದ್ದು, ಇನ್ನೂ 6 ಜನ ಮೇಲ್ವಿಚಾರಕ ವೈದ್ಯಾಧಿಕಾರಿ ಇದ್ದು ಪ್ರತಿ ಮನೆ ಮನೆಗೂ ಲಸಿಕೆ ಅಭಿಯಾನ ಪ್ರಾರಂಭಗೂಳ್ಳಿಲಿದೆ ಎಂದು ಮಾಹಿತಿ ನೀಡಿದರು
ವರದಿ; ಶಾನು ಯಲಿಗಾರ
ಕೋಲಾರ್: ರಾಜ್ಯದಾದ್ಯಂತ ಹತಾಶೆ ಮೂಡಿಸಿದ್ದ ಶ್ರೀನಿವಾಸಪುರ ವೃದ್ಧೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ತೀವ್ರ ತನಿಖೆ ನಡೆಸಿದ್ದ ಪೊಲೀಸರು ಇದೀಗ…
ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ.…
ರಾಯಚೂರು: ಹೋಂ ಗಾರ್ಡ್ ನೇಮಕಾತಿಗೆ ಲಂಚ ಪಡೆಯುತ್ತಿದ್ದ ರಾಯಚೂರಿನ ಹೋಂ ಗಾರ್ಡ್ ಕಮಾಂಡೆಂಟ್ ಜಂಬಣ್ಣ ರಾಮಸ್ವಾಮಿ ಅವರು ಲೋಕಾಯುಕ್ತದ ಜಾಲಕ್ಕೆ…
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ…
ತುಮಕೂರು: ಅನಾರೋಗ್ಯ ಹಾಗೂ ಪರೀಕ್ಷಾ ಫಲಿತಾಂಶದಿಂದ ಖಿನ್ನತೆಗೆ ಒಳಗಾಗಿದ್ದ 19 ವರ್ಷದ ಬಾಲಕನು ಆತ್ಮಹತ್ಯೆಗೆ ಶರಣಾದ ಮರುಮನಸ್ಸು ಮಾಡಬಲ್ಲ ದುರ್ಘಟನೆ…
ಕಲಬುರಗಿಯಲ್ಲಿ ಮಂಗಳವಾರ ದಿನದ ಬೆಳಗ್ಗೆ ಮಹತ್ವದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ) ಗ್ರಾಮೀಣ…