Latest

ಕುಂದಗೋಳ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮ

ಕುಂದಗೋಳ : ಇಂದಿನ ಆಧುನಿಕ ಭರಾಟೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನೃತ್ಯ, ಗಾಯನ, ವಿವಿಧ ಮನರಂ ಜನೆ ಕಾರ್ಯಕ್ರಮಗಳು ಕಣ್ಮರೆಯಾಗುತ್ತಿರುವುದು ಕಂಡು, ಇಲ್ಲೊಂದು ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅಂಗವಾಗಿ ದಿನಂ ಪ್ರತಿ ವಿವಿಧ ಮನರಂಜನೆ ಕಾರ್ಯಕ್ರಮಗಳು ಜರುಗುತ್ತಿವೆ.

ಹೌದು.! ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ 12 ನೇ ವರ್ಷದ ಗ್ರಾಮದೇವತೆ ಹಾಗೂ ಉಡಚಮ್ಮ ದೇವೆ ಜಾತ್ರೆ ಮಹೋತ್ಸವ ನಿಮಿತ್ತ, ಬರಗಾಲದ ಬಂಟ, ಬಂಜೆತನ ನಿವಾರಕ, ಎಂದೇ ಖ್ಯಾತಿ ಪಡೆದ ಮಹಾ ಪುರುಷ ಕಲಬುರಗಿ ಶ್ರೀ ಶರಣ ಬಸವೇಶ್ವರ ಪ್ರವಚನ, ವಿವಿಧ ಕಾರ್ಯಕ್ರಮಗಳಿಗೆ ಯರಗುಪ್ಪಿ ಗ್ರಾಮ ದೇವತೆ ದೇವಸ್ಥಾನದ ಆವರಣ ಸಾಕ್ಷಿಯಾಗಿತ್ತು.

ಒಂದು ತಿಂಗಳು ಪ್ರವಚನ ನಡೆಯುವುದರಿಂದ ಊರಿನ ಹಿರಿಯರ ಮಾರ್ಗದರ್ಶನದಂತೆ ಯುವಕರು ಒಂದಿಲ್ಲೊಂದು ಕಾರ್ಯಕ್ರಮ ಆಯೋಜಿಸಿ ಯುವಕರಿಗೆ ಪೋತ್ಸಾಹ, ಹುರಿದುಂಬಿಸಲು, ಪ್ರತಿನಿತ್ಯ ಮನೋಲ್ಲಾಸಕ್ಕಾಗಿ ಕಾರ್ಯಕ್ರಮಗಳು ನಡೆಸುತ್ತಾ ಇರುವುದು ಗಮನಾರ್ಹವಾಗಿದೆ.

ಪ್ರತಿದಿನ ಪ್ರವಚನ ಮಹಾಮಂಗಲ ಆಗಿದ ತಕ್ಷಣ ಮೂಸಿಕಲ್ ಚೇರ್, ಮಹಿಳೆ ಭಾವಚಿತ್ರಕ್ಕೆ ಸಿಂಧೂರ ಇಡುವುದು, ಕಪ್ಪೆ ಕುಣಿತ, ಹಿಂದೆ ಕೈಕಟ್ಟಿ ಬಾಳೆಹಣ್ಣು ತಿನ್ನುವುದು, ಹೀಗೆ ಸಾಕಷ್ಟು ಕಾರ್ಯಕ್ರಮಗಳು ಜೊತೆಗೆ ಮಹಿಳೆಯರು ನಾವೇನು ಕಡಿಮೆ ಇಲ್ಲದಂತೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಕ್ತವಾಗಿ ಭಾಗವಹಿಸುತ್ತಿದಾರೆ. ಇನ್ನೂ ಯುವಕರ ಕೇಕೆ, ಶಿಳ್ಳೆ, ಅತಿ ಉತ್ಸಾಹಕ್ಕೆ ಈ ವರ್ಷದ ಹಬ್ಬ ಸಾಕ್ಷಿಯಾಗಿದೆ.

ಒಟ್ಟಿನಲ್ಲಿ ಪ್ರತಿದಿನದ ಕಾರ್ಯಕ್ರಮಗಳು ನೋಡುಗರ ಮನ ಸೆಳೆಯಲು ಈ ಮನರಂಜನೆ ಕಾರ್ಯಕ್ರಮಗಳು ಸುಗ್ಗಿಯ ನಂತರ ಜನರನ್ನು ಒಂದೆಡೆ ಸೇರಿಸಿ ಸಂತೋಷದಿಂದ ಇರಲು ಸಾಕ್ಷಿಯಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago