Latest

ಕುಂದಗೋಳ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮ

ಕುಂದಗೋಳ : ಇಂದಿನ ಆಧುನಿಕ ಭರಾಟೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನೃತ್ಯ, ಗಾಯನ, ವಿವಿಧ ಮನರಂ ಜನೆ ಕಾರ್ಯಕ್ರಮಗಳು ಕಣ್ಮರೆಯಾಗುತ್ತಿರುವುದು ಕಂಡು, ಇಲ್ಲೊಂದು ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅಂಗವಾಗಿ ದಿನಂ ಪ್ರತಿ ವಿವಿಧ ಮನರಂಜನೆ ಕಾರ್ಯಕ್ರಮಗಳು ಜರುಗುತ್ತಿವೆ.

ಹೌದು.! ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ 12 ನೇ ವರ್ಷದ ಗ್ರಾಮದೇವತೆ ಹಾಗೂ ಉಡಚಮ್ಮ ದೇವೆ ಜಾತ್ರೆ ಮಹೋತ್ಸವ ನಿಮಿತ್ತ, ಬರಗಾಲದ ಬಂಟ, ಬಂಜೆತನ ನಿವಾರಕ, ಎಂದೇ ಖ್ಯಾತಿ ಪಡೆದ ಮಹಾ ಪುರುಷ ಕಲಬುರಗಿ ಶ್ರೀ ಶರಣ ಬಸವೇಶ್ವರ ಪ್ರವಚನ, ವಿವಿಧ ಕಾರ್ಯಕ್ರಮಗಳಿಗೆ ಯರಗುಪ್ಪಿ ಗ್ರಾಮ ದೇವತೆ ದೇವಸ್ಥಾನದ ಆವರಣ ಸಾಕ್ಷಿಯಾಗಿತ್ತು.

ಒಂದು ತಿಂಗಳು ಪ್ರವಚನ ನಡೆಯುವುದರಿಂದ ಊರಿನ ಹಿರಿಯರ ಮಾರ್ಗದರ್ಶನದಂತೆ ಯುವಕರು ಒಂದಿಲ್ಲೊಂದು ಕಾರ್ಯಕ್ರಮ ಆಯೋಜಿಸಿ ಯುವಕರಿಗೆ ಪೋತ್ಸಾಹ, ಹುರಿದುಂಬಿಸಲು, ಪ್ರತಿನಿತ್ಯ ಮನೋಲ್ಲಾಸಕ್ಕಾಗಿ ಕಾರ್ಯಕ್ರಮಗಳು ನಡೆಸುತ್ತಾ ಇರುವುದು ಗಮನಾರ್ಹವಾಗಿದೆ.

ಪ್ರತಿದಿನ ಪ್ರವಚನ ಮಹಾಮಂಗಲ ಆಗಿದ ತಕ್ಷಣ ಮೂಸಿಕಲ್ ಚೇರ್, ಮಹಿಳೆ ಭಾವಚಿತ್ರಕ್ಕೆ ಸಿಂಧೂರ ಇಡುವುದು, ಕಪ್ಪೆ ಕುಣಿತ, ಹಿಂದೆ ಕೈಕಟ್ಟಿ ಬಾಳೆಹಣ್ಣು ತಿನ್ನುವುದು, ಹೀಗೆ ಸಾಕಷ್ಟು ಕಾರ್ಯಕ್ರಮಗಳು ಜೊತೆಗೆ ಮಹಿಳೆಯರು ನಾವೇನು ಕಡಿಮೆ ಇಲ್ಲದಂತೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಕ್ತವಾಗಿ ಭಾಗವಹಿಸುತ್ತಿದಾರೆ. ಇನ್ನೂ ಯುವಕರ ಕೇಕೆ, ಶಿಳ್ಳೆ, ಅತಿ ಉತ್ಸಾಹಕ್ಕೆ ಈ ವರ್ಷದ ಹಬ್ಬ ಸಾಕ್ಷಿಯಾಗಿದೆ.

ಒಟ್ಟಿನಲ್ಲಿ ಪ್ರತಿದಿನದ ಕಾರ್ಯಕ್ರಮಗಳು ನೋಡುಗರ ಮನ ಸೆಳೆಯಲು ಈ ಮನರಂಜನೆ ಕಾರ್ಯಕ್ರಮಗಳು ಸುಗ್ಗಿಯ ನಂತರ ಜನರನ್ನು ಒಂದೆಡೆ ಸೇರಿಸಿ ಸಂತೋಷದಿಂದ ಇರಲು ಸಾಕ್ಷಿಯಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago