Latest

ಕುಂದಗೋಳ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮ

ಕುಂದಗೋಳ : ಇಂದಿನ ಆಧುನಿಕ ಭರಾಟೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನೃತ್ಯ, ಗಾಯನ, ವಿವಿಧ ಮನರಂ ಜನೆ ಕಾರ್ಯಕ್ರಮಗಳು ಕಣ್ಮರೆಯಾಗುತ್ತಿರುವುದು ಕಂಡು, ಇಲ್ಲೊಂದು ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅಂಗವಾಗಿ ದಿನಂ ಪ್ರತಿ ವಿವಿಧ ಮನರಂಜನೆ ಕಾರ್ಯಕ್ರಮಗಳು ಜರುಗುತ್ತಿವೆ.

ಹೌದು.! ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ 12 ನೇ ವರ್ಷದ ಗ್ರಾಮದೇವತೆ ಹಾಗೂ ಉಡಚಮ್ಮ ದೇವೆ ಜಾತ್ರೆ ಮಹೋತ್ಸವ ನಿಮಿತ್ತ, ಬರಗಾಲದ ಬಂಟ, ಬಂಜೆತನ ನಿವಾರಕ, ಎಂದೇ ಖ್ಯಾತಿ ಪಡೆದ ಮಹಾ ಪುರುಷ ಕಲಬುರಗಿ ಶ್ರೀ ಶರಣ ಬಸವೇಶ್ವರ ಪ್ರವಚನ, ವಿವಿಧ ಕಾರ್ಯಕ್ರಮಗಳಿಗೆ ಯರಗುಪ್ಪಿ ಗ್ರಾಮ ದೇವತೆ ದೇವಸ್ಥಾನದ ಆವರಣ ಸಾಕ್ಷಿಯಾಗಿತ್ತು.

ಒಂದು ತಿಂಗಳು ಪ್ರವಚನ ನಡೆಯುವುದರಿಂದ ಊರಿನ ಹಿರಿಯರ ಮಾರ್ಗದರ್ಶನದಂತೆ ಯುವಕರು ಒಂದಿಲ್ಲೊಂದು ಕಾರ್ಯಕ್ರಮ ಆಯೋಜಿಸಿ ಯುವಕರಿಗೆ ಪೋತ್ಸಾಹ, ಹುರಿದುಂಬಿಸಲು, ಪ್ರತಿನಿತ್ಯ ಮನೋಲ್ಲಾಸಕ್ಕಾಗಿ ಕಾರ್ಯಕ್ರಮಗಳು ನಡೆಸುತ್ತಾ ಇರುವುದು ಗಮನಾರ್ಹವಾಗಿದೆ.

ಪ್ರತಿದಿನ ಪ್ರವಚನ ಮಹಾಮಂಗಲ ಆಗಿದ ತಕ್ಷಣ ಮೂಸಿಕಲ್ ಚೇರ್, ಮಹಿಳೆ ಭಾವಚಿತ್ರಕ್ಕೆ ಸಿಂಧೂರ ಇಡುವುದು, ಕಪ್ಪೆ ಕುಣಿತ, ಹಿಂದೆ ಕೈಕಟ್ಟಿ ಬಾಳೆಹಣ್ಣು ತಿನ್ನುವುದು, ಹೀಗೆ ಸಾಕಷ್ಟು ಕಾರ್ಯಕ್ರಮಗಳು ಜೊತೆಗೆ ಮಹಿಳೆಯರು ನಾವೇನು ಕಡಿಮೆ ಇಲ್ಲದಂತೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಕ್ತವಾಗಿ ಭಾಗವಹಿಸುತ್ತಿದಾರೆ. ಇನ್ನೂ ಯುವಕರ ಕೇಕೆ, ಶಿಳ್ಳೆ, ಅತಿ ಉತ್ಸಾಹಕ್ಕೆ ಈ ವರ್ಷದ ಹಬ್ಬ ಸಾಕ್ಷಿಯಾಗಿದೆ.

ಒಟ್ಟಿನಲ್ಲಿ ಪ್ರತಿದಿನದ ಕಾರ್ಯಕ್ರಮಗಳು ನೋಡುಗರ ಮನ ಸೆಳೆಯಲು ಈ ಮನರಂಜನೆ ಕಾರ್ಯಕ್ರಮಗಳು ಸುಗ್ಗಿಯ ನಂತರ ಜನರನ್ನು ಒಂದೆಡೆ ಸೇರಿಸಿ ಸಂತೋಷದಿಂದ ಇರಲು ಸಾಕ್ಷಿಯಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

2 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

2 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago