Latest

ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಪ್ರತಿ ವರ್ಷ ಛಟ್ಟಿ ಅಮವಾಸ್ಯೆಯಂದು ತೆಪ್ಪದ ರಥೋತ್ಸವ ನಡೆಯುತ್ತದೆ.ಸೂರ್ಯ ಪಶ್ಚಿಮಾಭಿಮುಖವಾಗಿ ಇಳಿಯುತ್ತಿದ್ದಂತೆ, ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಹೊಂಡದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ ಹೊಂಡದ ಸುತ್ತಲೂ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು,ಉತ್ತತ್ತಿ ಎಸೆದು ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.

ಗುರು ವೀರಯೋಗೇಂದ್ರ ಅವರು ಮಹಾನ್ ತ್ಯಾಗಿ, ಹಠಯೋಗಿಯಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮನದ ಆರಾಧ್ಯ ದೈವವಾಗಿದ್ದಾರೆ. ಛಟ್ಟಿ ಅಮವಾಸ್ಯೆಯಂದು ದೇವಸ್ಥಾನ ಪಕ್ಕದ ಕಲ್ಯಾಣಿಯಲ್ಲಿ ತೆಪ್ಪದ ರಥೋತ್ಸವ ನಡೆಯುತ್ತದೆ. ರಥೋತ್ಸವದ ನಂತರ ದೀಪೋತ್ಸವ ಕಾರ್ಯಕ್ರಮವು ಸಹ ನಡೆಯುತ್ತದೆ ಎಂದು ಗ್ರಾಮದ ಶಿಕ್ಷಕರಾದ ಶ್ರೀ ಬಸವರಾಜ ಬೆಂಡ್ಲಗಟ್ಟಿ ಹೇಳಿದರು. ಚಿಗಳ್ಳಿ, ಕಾವಲಕೊಪ್ಪ ಮುಡಸಾಲಿ,ಅಜ್ಜಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮದ ಜನರು ಭಾಗವಹಿಸಿದ್ದರು.
ಶ್ರೀ ಸ.ಸ. ಕಲ್ಲೇಶ್ವರ ಮಹಾರಾಜರ ಆಶ್ರಮದಲ್ಲಿ ಶ್ರೀ ಶ್ರೀ ಷ.ಬ್ರ. ಶ್ರೀ ಗುರುನಂಜೇಶ್ವರ ಶಿವಾಚಾರ್ಯರು, ಗುರುನಂಜೇಶ್ವರ ಮಠ, ಕೂಡಲ ಇವರಿಂದ ದೀಪೋತ್ಸವ ಕಾರ್ಯಕ್ರಮ ಚಾಲನೆಗೊಂಡು ಶ್ರೀ ದೀಪನಾಥೇಶ್ವರ, ಈಶ್ವರ ದೇವಸ್ಥಾನ, ಶ್ರೀ ಫಕ್ಕೀರೇಶ್ವರ ದೇವಸ್ಥಾನ ಹಾಗೂ ಶ್ರೀ ವಿರಯೋಗೇಂದ್ರಸ್ವಾಮಿಗಳ ದೇವಸ್ಥಾನ ಚೌಕಿಮಠದ ವರೆಗೆ ದೀಪೋತ್ಸವವು ಜರುಗಿ ನಂತರ ಶ್ರೀ ವೀರಯೋಗೇಂದ್ರ ಸ್ವಾಮಿಯ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಜರಗಿತು.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago