Latest

ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಪ್ರತಿ ವರ್ಷ ಛಟ್ಟಿ ಅಮವಾಸ್ಯೆಯಂದು ತೆಪ್ಪದ ರಥೋತ್ಸವ ನಡೆಯುತ್ತದೆ.ಸೂರ್ಯ ಪಶ್ಚಿಮಾಭಿಮುಖವಾಗಿ ಇಳಿಯುತ್ತಿದ್ದಂತೆ, ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಹೊಂಡದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ ಹೊಂಡದ ಸುತ್ತಲೂ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು,ಉತ್ತತ್ತಿ ಎಸೆದು ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.

ಗುರು ವೀರಯೋಗೇಂದ್ರ ಅವರು ಮಹಾನ್ ತ್ಯಾಗಿ, ಹಠಯೋಗಿಯಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮನದ ಆರಾಧ್ಯ ದೈವವಾಗಿದ್ದಾರೆ. ಛಟ್ಟಿ ಅಮವಾಸ್ಯೆಯಂದು ದೇವಸ್ಥಾನ ಪಕ್ಕದ ಕಲ್ಯಾಣಿಯಲ್ಲಿ ತೆಪ್ಪದ ರಥೋತ್ಸವ ನಡೆಯುತ್ತದೆ. ರಥೋತ್ಸವದ ನಂತರ ದೀಪೋತ್ಸವ ಕಾರ್ಯಕ್ರಮವು ಸಹ ನಡೆಯುತ್ತದೆ ಎಂದು ಗ್ರಾಮದ ಶಿಕ್ಷಕರಾದ ಶ್ರೀ ಬಸವರಾಜ ಬೆಂಡ್ಲಗಟ್ಟಿ ಹೇಳಿದರು. ಚಿಗಳ್ಳಿ, ಕಾವಲಕೊಪ್ಪ ಮುಡಸಾಲಿ,ಅಜ್ಜಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮದ ಜನರು ಭಾಗವಹಿಸಿದ್ದರು.
ಶ್ರೀ ಸ.ಸ. ಕಲ್ಲೇಶ್ವರ ಮಹಾರಾಜರ ಆಶ್ರಮದಲ್ಲಿ ಶ್ರೀ ಶ್ರೀ ಷ.ಬ್ರ. ಶ್ರೀ ಗುರುನಂಜೇಶ್ವರ ಶಿವಾಚಾರ್ಯರು, ಗುರುನಂಜೇಶ್ವರ ಮಠ, ಕೂಡಲ ಇವರಿಂದ ದೀಪೋತ್ಸವ ಕಾರ್ಯಕ್ರಮ ಚಾಲನೆಗೊಂಡು ಶ್ರೀ ದೀಪನಾಥೇಶ್ವರ, ಈಶ್ವರ ದೇವಸ್ಥಾನ, ಶ್ರೀ ಫಕ್ಕೀರೇಶ್ವರ ದೇವಸ್ಥಾನ ಹಾಗೂ ಶ್ರೀ ವಿರಯೋಗೇಂದ್ರಸ್ವಾಮಿಗಳ ದೇವಸ್ಥಾನ ಚೌಕಿಮಠದ ವರೆಗೆ ದೀಪೋತ್ಸವವು ಜರುಗಿ ನಂತರ ಶ್ರೀ ವೀರಯೋಗೇಂದ್ರ ಸ್ವಾಮಿಯ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಜರಗಿತು.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago