Latest

ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಪ್ರತಿ ವರ್ಷ ಛಟ್ಟಿ ಅಮವಾಸ್ಯೆಯಂದು ತೆಪ್ಪದ ರಥೋತ್ಸವ ನಡೆಯುತ್ತದೆ.ಸೂರ್ಯ ಪಶ್ಚಿಮಾಭಿಮುಖವಾಗಿ ಇಳಿಯುತ್ತಿದ್ದಂತೆ, ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಹೊಂಡದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ ಹೊಂಡದ ಸುತ್ತಲೂ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು,ಉತ್ತತ್ತಿ ಎಸೆದು ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.

ಗುರು ವೀರಯೋಗೇಂದ್ರ ಅವರು ಮಹಾನ್ ತ್ಯಾಗಿ, ಹಠಯೋಗಿಯಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮನದ ಆರಾಧ್ಯ ದೈವವಾಗಿದ್ದಾರೆ. ಛಟ್ಟಿ ಅಮವಾಸ್ಯೆಯಂದು ದೇವಸ್ಥಾನ ಪಕ್ಕದ ಕಲ್ಯಾಣಿಯಲ್ಲಿ ತೆಪ್ಪದ ರಥೋತ್ಸವ ನಡೆಯುತ್ತದೆ. ರಥೋತ್ಸವದ ನಂತರ ದೀಪೋತ್ಸವ ಕಾರ್ಯಕ್ರಮವು ಸಹ ನಡೆಯುತ್ತದೆ ಎಂದು ಗ್ರಾಮದ ಶಿಕ್ಷಕರಾದ ಶ್ರೀ ಬಸವರಾಜ ಬೆಂಡ್ಲಗಟ್ಟಿ ಹೇಳಿದರು. ಚಿಗಳ್ಳಿ, ಕಾವಲಕೊಪ್ಪ ಮುಡಸಾಲಿ,ಅಜ್ಜಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮದ ಜನರು ಭಾಗವಹಿಸಿದ್ದರು.
ಶ್ರೀ ಸ.ಸ. ಕಲ್ಲೇಶ್ವರ ಮಹಾರಾಜರ ಆಶ್ರಮದಲ್ಲಿ ಶ್ರೀ ಶ್ರೀ ಷ.ಬ್ರ. ಶ್ರೀ ಗುರುನಂಜೇಶ್ವರ ಶಿವಾಚಾರ್ಯರು, ಗುರುನಂಜೇಶ್ವರ ಮಠ, ಕೂಡಲ ಇವರಿಂದ ದೀಪೋತ್ಸವ ಕಾರ್ಯಕ್ರಮ ಚಾಲನೆಗೊಂಡು ಶ್ರೀ ದೀಪನಾಥೇಶ್ವರ, ಈಶ್ವರ ದೇವಸ್ಥಾನ, ಶ್ರೀ ಫಕ್ಕೀರೇಶ್ವರ ದೇವಸ್ಥಾನ ಹಾಗೂ ಶ್ರೀ ವಿರಯೋಗೇಂದ್ರಸ್ವಾಮಿಗಳ ದೇವಸ್ಥಾನ ಚೌಕಿಮಠದ ವರೆಗೆ ದೀಪೋತ್ಸವವು ಜರುಗಿ ನಂತರ ಶ್ರೀ ವೀರಯೋಗೇಂದ್ರ ಸ್ವಾಮಿಯ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಜರಗಿತು.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

3 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

3 hours ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

3 hours ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

3 hours ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

3 hours ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

3 hours ago