Latest

ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಪ್ರತಿ ವರ್ಷ ಛಟ್ಟಿ ಅಮವಾಸ್ಯೆಯಂದು ತೆಪ್ಪದ ರಥೋತ್ಸವ ನಡೆಯುತ್ತದೆ.ಸೂರ್ಯ ಪಶ್ಚಿಮಾಭಿಮುಖವಾಗಿ ಇಳಿಯುತ್ತಿದ್ದಂತೆ, ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಹೊಂಡದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ ಹೊಂಡದ ಸುತ್ತಲೂ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು,ಉತ್ತತ್ತಿ ಎಸೆದು ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.

ಗುರು ವೀರಯೋಗೇಂದ್ರ ಅವರು ಮಹಾನ್ ತ್ಯಾಗಿ, ಹಠಯೋಗಿಯಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮನದ ಆರಾಧ್ಯ ದೈವವಾಗಿದ್ದಾರೆ. ಛಟ್ಟಿ ಅಮವಾಸ್ಯೆಯಂದು ದೇವಸ್ಥಾನ ಪಕ್ಕದ ಕಲ್ಯಾಣಿಯಲ್ಲಿ ತೆಪ್ಪದ ರಥೋತ್ಸವ ನಡೆಯುತ್ತದೆ. ರಥೋತ್ಸವದ ನಂತರ ದೀಪೋತ್ಸವ ಕಾರ್ಯಕ್ರಮವು ಸಹ ನಡೆಯುತ್ತದೆ ಎಂದು ಗ್ರಾಮದ ಶಿಕ್ಷಕರಾದ ಶ್ರೀ ಬಸವರಾಜ ಬೆಂಡ್ಲಗಟ್ಟಿ ಹೇಳಿದರು. ಚಿಗಳ್ಳಿ, ಕಾವಲಕೊಪ್ಪ ಮುಡಸಾಲಿ,ಅಜ್ಜಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮದ ಜನರು ಭಾಗವಹಿಸಿದ್ದರು.
ಶ್ರೀ ಸ.ಸ. ಕಲ್ಲೇಶ್ವರ ಮಹಾರಾಜರ ಆಶ್ರಮದಲ್ಲಿ ಶ್ರೀ ಶ್ರೀ ಷ.ಬ್ರ. ಶ್ರೀ ಗುರುನಂಜೇಶ್ವರ ಶಿವಾಚಾರ್ಯರು, ಗುರುನಂಜೇಶ್ವರ ಮಠ, ಕೂಡಲ ಇವರಿಂದ ದೀಪೋತ್ಸವ ಕಾರ್ಯಕ್ರಮ ಚಾಲನೆಗೊಂಡು ಶ್ರೀ ದೀಪನಾಥೇಶ್ವರ, ಈಶ್ವರ ದೇವಸ್ಥಾನ, ಶ್ರೀ ಫಕ್ಕೀರೇಶ್ವರ ದೇವಸ್ಥಾನ ಹಾಗೂ ಶ್ರೀ ವಿರಯೋಗೇಂದ್ರಸ್ವಾಮಿಗಳ ದೇವಸ್ಥಾನ ಚೌಕಿಮಠದ ವರೆಗೆ ದೀಪೋತ್ಸವವು ಜರುಗಿ ನಂತರ ಶ್ರೀ ವೀರಯೋಗೇಂದ್ರ ಸ್ವಾಮಿಯ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಜರಗಿತು.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago