ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉತ್ತರಕನ್ನಡ ಜಿಲ್ಲೆ ಮಲೆನಾಡು ಪ್ರದೇಶ ದಟ್ಟ ಕಾಡಿನಿಂದ ಹಾಗೂ ಹಲವಾರು ರೀತಿಯ ಪ್ರಾಣಿಗಳು ಇರುವ ಜಿಲ್ಲೆಯಾಗಿದೆ. ಇದೊಂದು ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ವೆಂಕಟ್ರಮಣ ನಾಯ್ಕ ಎನ್ನುವ ವ್ಯಕ್ತಿ ಅನಧಿಕೃತವಾಗಿ ಅರಣ್ಯ ನಾಶಗೊಳಿಸಿ ರಸ್ತೆ ನಿರ್ಮಾಣಮಾಡಿದ್ದಾರೆ .
ತಾಲೂಕಿನ ತಲಗೊಡು ಕೋಟೆಮನೆ ಭಾಗದಲ್ಲಿ ಕರ್ಗದ್ದೆ ನಿವಾಸಿಯಾದ ವೆಂಕಟ್ರಮಣ ನಾಯ್ಕ ಎಂಬಾತ 150ಮೀ ರಸ್ತೆಯನ್ನು ಅರಣ್ಯ ಸಂಪತ್ತನ್ನು ನಾಶ ಮಾಡಿ ತನ್ನ ಮಣ್ಣಿನ ಲಾರಿಯನ್ನು ಸಾಗಿಸಲು ಅಲ್ಲಿದ್ದ ಮರಗಿಡಗಳನ್ನು ಕಡಿದು ರಸ್ತೆ ನಿರ್ಮಿಸಿದ್ದಾನೆ. ಅವನ ಮಾಲ್ಕಿ ಜಾಗಕ್ಕೆ ಹೋಗಲು ಬೇರೆ ರಸ್ತೆಗಳಿದ್ದರು ಕೂಡ ಇತ ಈ ಗ್ರಾಮದ ಜನರಿಗೆ ತೊಂದರೆಯಾಗುವಂತೆ ಇಲ್ಲಿಯೇ ರಸ್ತೆ ನಿರ್ಮಿಸಿದ್ದಾರೆ ಇದು ಅಲ್ಲಿದ್ದ ಗ್ರಾಮದ ನಿವಾಸಿಗಳಿಗೆ ತುಂಬಾ ತೊಂದರೆಯಾಗಿದ್ದು. ತಮ್ಮ ಕೃಷಿ ಜಮಿನಾದ ಸರಿಸುಮಾರು 500 ಎಕರೆ ಕೃಷಿ ಭೂಮಿ ಇದ್ದಿದ್ದರಿಂದ ಅಲ್ಲಿನ ಕೃಷಿ ಕಾರ್ಯಗಳಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿ ಸಂಬಂದ ಪಟ್ಟ ಅಧಿಕಾರಿಗಳಿಗೆ ಇಲ್ಲಿ ರಸ್ತೆಯ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದ ಆರ್ ಎಫ್ ಓ ಶರತ್ ಶೆಟ್ಟಿಯವರು ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಅರಣ್ಯ ನಾಶ ಮಾಡಿ ರಸ್ತೆ ನಿರ್ಮಿಸಿದ ವೆಂಕಟ್ರಮಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ಅಲ್ಲಿ ನಿರ್ಮಿಸಿದ ರಸ್ತೆಗೆ ಗುಂಡಿಗಳನ್ನು ತೆಗೆದು ವಾಹನ ಹೋಗದಂತೆ ನಿಲ್ಲಿಸಲಾಗಿದೆ.
ವರದಿ :ಶ್ರೀಪಾದ್ ಹೆಗಡೆ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…