Latest

ಅರಣ್ಯ ನಾಶ ಮಾಡಿ ರಸ್ತೆ ನಿರ್ಮಿಸಿದ ವೆಂಕಟ್ರಮಣ ನಾಯ್ಕ; ಪ್ರತಿಭಟನೆಗೆ ಮುಂದಾದ ಸ್ಥಳೀಯರು.

ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉತ್ತರಕನ್ನಡ ಜಿಲ್ಲೆ ಮಲೆನಾಡು ಪ್ರದೇಶ ದಟ್ಟ ಕಾಡಿನಿಂದ ಹಾಗೂ ಹಲವಾರು ರೀತಿಯ ಪ್ರಾಣಿಗಳು ಇರುವ ಜಿಲ್ಲೆಯಾಗಿದೆ. ಇದೊಂದು ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ವೆಂಕಟ್ರಮಣ ನಾಯ್ಕ ಎನ್ನುವ ವ್ಯಕ್ತಿ ಅನಧಿಕೃತವಾಗಿ ಅರಣ್ಯ ನಾಶಗೊಳಿಸಿ ರಸ್ತೆ ನಿರ್ಮಾಣಮಾಡಿದ್ದಾರೆ .
ತಾಲೂಕಿನ ತಲಗೊಡು ಕೋಟೆಮನೆ ಭಾಗದಲ್ಲಿ ಕರ್ಗದ್ದೆ ನಿವಾಸಿಯಾದ ವೆಂಕಟ್ರಮಣ ನಾಯ್ಕ ಎಂಬಾತ 150ಮೀ ರಸ್ತೆಯನ್ನು ಅರಣ್ಯ ಸಂಪತ್ತನ್ನು ನಾಶ ಮಾಡಿ ತನ್ನ ಮಣ್ಣಿನ ಲಾರಿಯನ್ನು ಸಾಗಿಸಲು ಅಲ್ಲಿದ್ದ ಮರಗಿಡಗಳನ್ನು ಕಡಿದು ರಸ್ತೆ ನಿರ್ಮಿಸಿದ್ದಾನೆ. ಅವನ ಮಾಲ್ಕಿ ಜಾಗಕ್ಕೆ ಹೋಗಲು ಬೇರೆ ರಸ್ತೆಗಳಿದ್ದರು ಕೂಡ ಇತ ಈ ಗ್ರಾಮದ ಜನರಿಗೆ ತೊಂದರೆಯಾಗುವಂತೆ ಇಲ್ಲಿಯೇ ರಸ್ತೆ ನಿರ್ಮಿಸಿದ್ದಾರೆ ಇದು ಅಲ್ಲಿದ್ದ ಗ್ರಾಮದ ನಿವಾಸಿಗಳಿಗೆ ತುಂಬಾ ತೊಂದರೆಯಾಗಿದ್ದು. ತಮ್ಮ ಕೃಷಿ ಜಮಿನಾದ ಸರಿಸುಮಾರು 500 ಎಕರೆ ಕೃಷಿ ಭೂಮಿ ಇದ್ದಿದ್ದರಿಂದ ಅಲ್ಲಿನ ಕೃಷಿ ಕಾರ್ಯಗಳಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿ ಸಂಬಂದ ಪಟ್ಟ ಅಧಿಕಾರಿಗಳಿಗೆ ಇಲ್ಲಿ ರಸ್ತೆಯ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದ ಆರ್ ಎಫ್ ಓ ಶರತ್ ಶೆಟ್ಟಿಯವರು ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಅರಣ್ಯ ನಾಶ ಮಾಡಿ ರಸ್ತೆ ನಿರ್ಮಿಸಿದ ವೆಂಕಟ್ರಮಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ಅಲ್ಲಿ ನಿರ್ಮಿಸಿದ ರಸ್ತೆಗೆ ಗುಂಡಿಗಳನ್ನು ತೆಗೆದು ವಾಹನ ಹೋಗದಂತೆ ನಿಲ್ಲಿಸಲಾಗಿದೆ.

ವರದಿ :ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

13 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

14 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

14 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago