Latest

ಅರಣ್ಯ ನಾಶ ಮಾಡಿ ರಸ್ತೆ ನಿರ್ಮಿಸಿದ ವೆಂಕಟ್ರಮಣ ನಾಯ್ಕ; ಪ್ರತಿಭಟನೆಗೆ ಮುಂದಾದ ಸ್ಥಳೀಯರು.

ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉತ್ತರಕನ್ನಡ ಜಿಲ್ಲೆ ಮಲೆನಾಡು ಪ್ರದೇಶ ದಟ್ಟ ಕಾಡಿನಿಂದ ಹಾಗೂ ಹಲವಾರು ರೀತಿಯ ಪ್ರಾಣಿಗಳು ಇರುವ ಜಿಲ್ಲೆಯಾಗಿದೆ. ಇದೊಂದು ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ವೆಂಕಟ್ರಮಣ ನಾಯ್ಕ ಎನ್ನುವ ವ್ಯಕ್ತಿ ಅನಧಿಕೃತವಾಗಿ ಅರಣ್ಯ ನಾಶಗೊಳಿಸಿ ರಸ್ತೆ ನಿರ್ಮಾಣಮಾಡಿದ್ದಾರೆ .
ತಾಲೂಕಿನ ತಲಗೊಡು ಕೋಟೆಮನೆ ಭಾಗದಲ್ಲಿ ಕರ್ಗದ್ದೆ ನಿವಾಸಿಯಾದ ವೆಂಕಟ್ರಮಣ ನಾಯ್ಕ ಎಂಬಾತ 150ಮೀ ರಸ್ತೆಯನ್ನು ಅರಣ್ಯ ಸಂಪತ್ತನ್ನು ನಾಶ ಮಾಡಿ ತನ್ನ ಮಣ್ಣಿನ ಲಾರಿಯನ್ನು ಸಾಗಿಸಲು ಅಲ್ಲಿದ್ದ ಮರಗಿಡಗಳನ್ನು ಕಡಿದು ರಸ್ತೆ ನಿರ್ಮಿಸಿದ್ದಾನೆ. ಅವನ ಮಾಲ್ಕಿ ಜಾಗಕ್ಕೆ ಹೋಗಲು ಬೇರೆ ರಸ್ತೆಗಳಿದ್ದರು ಕೂಡ ಇತ ಈ ಗ್ರಾಮದ ಜನರಿಗೆ ತೊಂದರೆಯಾಗುವಂತೆ ಇಲ್ಲಿಯೇ ರಸ್ತೆ ನಿರ್ಮಿಸಿದ್ದಾರೆ ಇದು ಅಲ್ಲಿದ್ದ ಗ್ರಾಮದ ನಿವಾಸಿಗಳಿಗೆ ತುಂಬಾ ತೊಂದರೆಯಾಗಿದ್ದು. ತಮ್ಮ ಕೃಷಿ ಜಮಿನಾದ ಸರಿಸುಮಾರು 500 ಎಕರೆ ಕೃಷಿ ಭೂಮಿ ಇದ್ದಿದ್ದರಿಂದ ಅಲ್ಲಿನ ಕೃಷಿ ಕಾರ್ಯಗಳಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿ ಸಂಬಂದ ಪಟ್ಟ ಅಧಿಕಾರಿಗಳಿಗೆ ಇಲ್ಲಿ ರಸ್ತೆಯ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದ ಆರ್ ಎಫ್ ಓ ಶರತ್ ಶೆಟ್ಟಿಯವರು ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಅರಣ್ಯ ನಾಶ ಮಾಡಿ ರಸ್ತೆ ನಿರ್ಮಿಸಿದ ವೆಂಕಟ್ರಮಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ಅಲ್ಲಿ ನಿರ್ಮಿಸಿದ ರಸ್ತೆಗೆ ಗುಂಡಿಗಳನ್ನು ತೆಗೆದು ವಾಹನ ಹೋಗದಂತೆ ನಿಲ್ಲಿಸಲಾಗಿದೆ.

ವರದಿ :ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago