ಬೆಂಗಳೂರು: ನಗರದ ಏರ್ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ಭೀಕರ ದುರ್ಘಟನೆಗೆ ಸಂಬಂಧಿಸಿ ಮೂರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವನ್ನಪ್ಪಿದ್ದ ಘಟನೆ ಈಗ ಗಂಭೀರ ತಿರುವು ಪಡೆದುಕೊಂಡಿದೆ.
ಮೃತ ಖಾಸಿಂ ಸಾಬ್ (35) ಅವರ ಮಾವ ಸೈಯ್ಯದ್ ಖಾದರ್ ನೀಡಿದ ದೂರಿನ ಆಧಾರದಲ್ಲಿ, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯನ್ನು ಚಾಲನೆ ಮಾಡುತ್ತಿದ್ದ ಚಾಲಕ, ಕಾಮಗಾರಿ ಜವಾಬ್ದಾರಿ ಹೊಂದಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 281 (ಅಪಾಯಕಾರಿಯಾಗಿ ವಾಹನ ಚಲಾಯಿಸುವುದು) ಮತ್ತು 106 (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಮಂಗಳವಾರ ತಡರಾತ್ರಿ, ಲಾರಿಯಲ್ಲಿ ವಯಾಡೆಕ್ಟ್ನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಲಾರಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಸಮತೋಲನ ತಪ್ಪಿದ ವಯಾಡೆಕ್ಟ್ ನಿಯಂತ್ರಣ ತಪ್ಪಿ ಅತ್ತ ಜಾರಿದ ಆಟೋ ಮೇಲೆ ಬಿದ್ದಿತು. ಪರಿಣಾಮ ಆಟೋದಲ್ಲಿದ್ದ ಖಾಸಿಂ ಸಾಬ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟರು.
ದುರ್ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾದನು. ಈ ಘಟನೆ ತೀವ್ರ ಆಕ್ರೋಶವನ್ನುಂಟುಮಾಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…