ಬೆಂಗಳೂರು: ನಗರದ ಏರ್ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ಭೀಕರ ದುರ್ಘಟನೆಗೆ ಸಂಬಂಧಿಸಿ ಮೂರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವನ್ನಪ್ಪಿದ್ದ ಘಟನೆ ಈಗ ಗಂಭೀರ ತಿರುವು ಪಡೆದುಕೊಂಡಿದೆ.
ಮೃತ ಖಾಸಿಂ ಸಾಬ್ (35) ಅವರ ಮಾವ ಸೈಯ್ಯದ್ ಖಾದರ್ ನೀಡಿದ ದೂರಿನ ಆಧಾರದಲ್ಲಿ, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯನ್ನು ಚಾಲನೆ ಮಾಡುತ್ತಿದ್ದ ಚಾಲಕ, ಕಾಮಗಾರಿ ಜವಾಬ್ದಾರಿ ಹೊಂದಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 281 (ಅಪಾಯಕಾರಿಯಾಗಿ ವಾಹನ ಚಲಾಯಿಸುವುದು) ಮತ್ತು 106 (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಮಂಗಳವಾರ ತಡರಾತ್ರಿ, ಲಾರಿಯಲ್ಲಿ ವಯಾಡೆಕ್ಟ್ನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಲಾರಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಸಮತೋಲನ ತಪ್ಪಿದ ವಯಾಡೆಕ್ಟ್ ನಿಯಂತ್ರಣ ತಪ್ಪಿ ಅತ್ತ ಜಾರಿದ ಆಟೋ ಮೇಲೆ ಬಿದ್ದಿತು. ಪರಿಣಾಮ ಆಟೋದಲ್ಲಿದ್ದ ಖಾಸಿಂ ಸಾಬ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟರು.
ದುರ್ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾದನು. ಈ ಘಟನೆ ತೀವ್ರ ಆಕ್ರೋಶವನ್ನುಂಟುಮಾಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…