ಬೆಂಗಳೂರು: ನಗರದ ಏರ್ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ಭೀಕರ ದುರ್ಘಟನೆಗೆ ಸಂಬಂಧಿಸಿ ಮೂರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವನ್ನಪ್ಪಿದ್ದ ಘಟನೆ ಈಗ ಗಂಭೀರ ತಿರುವು ಪಡೆದುಕೊಂಡಿದೆ.
ಮೃತ ಖಾಸಿಂ ಸಾಬ್ (35) ಅವರ ಮಾವ ಸೈಯ್ಯದ್ ಖಾದರ್ ನೀಡಿದ ದೂರಿನ ಆಧಾರದಲ್ಲಿ, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯನ್ನು ಚಾಲನೆ ಮಾಡುತ್ತಿದ್ದ ಚಾಲಕ, ಕಾಮಗಾರಿ ಜವಾಬ್ದಾರಿ ಹೊಂದಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 281 (ಅಪಾಯಕಾರಿಯಾಗಿ ವಾಹನ ಚಲಾಯಿಸುವುದು) ಮತ್ತು 106 (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಮಂಗಳವಾರ ತಡರಾತ್ರಿ, ಲಾರಿಯಲ್ಲಿ ವಯಾಡೆಕ್ಟ್ನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಲಾರಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಸಮತೋಲನ ತಪ್ಪಿದ ವಯಾಡೆಕ್ಟ್ ನಿಯಂತ್ರಣ ತಪ್ಪಿ ಅತ್ತ ಜಾರಿದ ಆಟೋ ಮೇಲೆ ಬಿದ್ದಿತು. ಪರಿಣಾಮ ಆಟೋದಲ್ಲಿದ್ದ ಖಾಸಿಂ ಸಾಬ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟರು.
ದುರ್ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾದನು. ಈ ಘಟನೆ ತೀವ್ರ ಆಕ್ರೋಶವನ್ನುಂಟುಮಾಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…