ಬೆಂಗಳೂರು: ನಗರದ ಏರ್ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ಭೀಕರ ದುರ್ಘಟನೆಗೆ ಸಂಬಂಧಿಸಿ ಮೂರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವನ್ನಪ್ಪಿದ್ದ ಘಟನೆ ಈಗ ಗಂಭೀರ ತಿರುವು ಪಡೆದುಕೊಂಡಿದೆ.
ಮೃತ ಖಾಸಿಂ ಸಾಬ್ (35) ಅವರ ಮಾವ ಸೈಯ್ಯದ್ ಖಾದರ್ ನೀಡಿದ ದೂರಿನ ಆಧಾರದಲ್ಲಿ, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯನ್ನು ಚಾಲನೆ ಮಾಡುತ್ತಿದ್ದ ಚಾಲಕ, ಕಾಮಗಾರಿ ಜವಾಬ್ದಾರಿ ಹೊಂದಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 281 (ಅಪಾಯಕಾರಿಯಾಗಿ ವಾಹನ ಚಲಾಯಿಸುವುದು) ಮತ್ತು 106 (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಮಂಗಳವಾರ ತಡರಾತ್ರಿ, ಲಾರಿಯಲ್ಲಿ ವಯಾಡೆಕ್ಟ್ನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಲಾರಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಸಮತೋಲನ ತಪ್ಪಿದ ವಯಾಡೆಕ್ಟ್ ನಿಯಂತ್ರಣ ತಪ್ಪಿ ಅತ್ತ ಜಾರಿದ ಆಟೋ ಮೇಲೆ ಬಿದ್ದಿತು. ಪರಿಣಾಮ ಆಟೋದಲ್ಲಿದ್ದ ಖಾಸಿಂ ಸಾಬ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟರು.
ದುರ್ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾದನು. ಈ ಘಟನೆ ತೀವ್ರ ಆಕ್ರೋಶವನ್ನುಂಟುಮಾಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…