Latest

ಸಿಎಂ ವಿರುದ್ಧ ವಿಡಿಯೋ: ಮೈಸೂರು ಕಾರಾಗೃಹ ಕಾನ್‌ಸ್ಟೇಬಲ್ ಅಮಾನತು

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಎಚ್.ಎನ್. ಮಧುಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ವಾಗಿ ವಿಡಿಯೋ ಹಂಚಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ್ ಅವರು ಈ ಸಂಬಂಧ ಅಮಾನತು ಆದೇಶ ಹೊರಡಿಸಿದ್ದಾರೆ. ಮಧುಕುಮಾರ್ ಅವರು ತಮ್ಮ ವಿಡಿಯೋದಲ್ಲಿ ಮುಖ್ಯಮಂತ್ರಿಯನ್ನು ಏಕವಚನದಲ್ಲಿ ಟೀಕಿಸಿದ ಕುರಿತು ವರದಿಯಾಗಿದೆ.

ಏಪ್ರಿಲ್ 28 ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಎಸ್ಪಿ ವಿರುದ್ಧ ಕಿಡಿಕಾರಿದ ಘಟನೆ ಕುರಿತಂತೆ ಮಧುಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಧಿಕಾರವಾಹಕರ ಗಮನ ಸೆಳೆದಿದೆ.

ಸರ್ಕಾರಿ ನೌಕರನೊಬ್ಬನಿಂದಾದ ವರ್ತನೆ ಸರಿಯಾದದಲ್ಲವೆಂದು ಪರಿಗಣಿಸಿ, ಹಿರಿಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಮುಂದಿನ ತನಿಖೆ ಫಲಿತಾಂಶದಂತೆ ಮುಂದಿನ ಕ್ರಮ ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

nazeer ahamad

Recent Posts

ಭ್ರಷ್ಟಾಚಾರ ಆರೋಪ ಪಿತೂರಿ: ಬಿ.ಆರ್. ಪಾಟೀಲ್ ವಿರುದ್ಧ ಗುತ್ತೇದಾರ ಗಂಭೀರ ವಾಗ್ದಾಳಿ

ಕಲಬುರ್ಗಿ ಜಿಲ್ಲೆ ಆಳಂದ್‌ ಶಾಸಕ ಬಿ.ಆರ್. ಪಾಟೀಲ್‌ ವಿರುದ್ಧ ಗಂಭೀರ ಆರೋಪ ಹೊರಿಸಿ, ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮಾಧ್ಯಮಗಳ…

14 hours ago

ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ: ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ 5 ಮಂದಿ ಬಂಧನ

ಭಟ್ಕಳ : ಮುರುಡೇಶ್ವರದ ಬಳಿ ಇರುವ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ ಅಂದರ್ ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದ ಐವರ…

14 hours ago

ಕಾರ್ಯಕ್ರಮದ ಮಧ್ಯೆ ಮಾಜಿ ಶಾಸಕರ ಜೇಬು ಕತ್ತರಿಸಿ 70 ಸಾವಿರ ರೂ. ಕದ್ದ ಕಳ್ಳನಿಗೆ ಧರ್ಮದೇಟು!

ರಾಯಚೂರು: ಸಚಿವ ಎನ್.ಎಸ್. ಬೋಸರಾಜು ಅವರ ಹುಟ್ಟುಹಬ್ಬದ ನಿಮಿತ್ತ ನಡೆದ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಚ್ಚರಿಯ ಕಳ್ಳತನ ಘಟನೆ…

18 hours ago

ಫರಿದಾಬಾದ್‌ನಲ್ಲಿ ಹೃದಯವಿದ್ರಾವಕ ಘಟನೆ: ಯುವತಿ ಶವ 10 ಅಡಿ ಆಳದ ಚರಂಡಿಯಲ್ಲಿ ಪತ್ತೆ, ಅತ್ತೆ-ಮಾವ ಸಹಿತ ನಾಲ್ವರು ಬಂಧನ

ಫರಿದಾಬಾದ್ (ಜೂನ್ 20): ಹರಿಯಾಣದ ಫರಿದಾಬಾದ್‌ನ ರೋಶನ್ ನಗರದ ವಸತಿಬೀದಿಯೊಂದರಲ್ಲಿ 10 ಅಡಿ ಆಳದ ಕಂದಕದಲ್ಲಿ ಸಡಿಲ ಸ್ಥಿತಿಯಲ್ಲಿದ್ದ ಮಹಿಳೆಯ…

19 hours ago

ತಹಶೀಲ್ದಾರರ ಡಿಜಿಟಲ್ ಸಹಿ ನಕಲು: ಜಮೀನು ಅಕ್ರಮ ವರ್ಗಾವಣೆಯ ಹಗರಣ ಬಹಿರಂಗ”

ಬೀದರ್ ಜಿಲ್ಲೆಯಲ್ಲಿ ಸರ್ಕಾರದ ಅಧಿಕಾರಿಗಳನ್ನು ಶಾಕ್‌ಗೆ ಒಳಪಡಿಸುವಂತಹ ಭೂಮಿ ಹಗರಣವೊಂದು ಬೆಳಕಿಗೆ ಬಂದಿದೆ. ನಕಲಿ ಡಿಜಿಟಲ್ ಸಹಿ ಬಳಸಿ ಒಬ್ಬರ…

21 hours ago

ರಾಜಕೀಯ ವೈಷಮ್ಯಕ್ಕೆ ಪ್ರಾಣ ಬಲಿ: ಹಸುವಿಗೆ ಮಚ್ಚಿನಿಂದ ಹಲ್ಲೆ, ಚಿಕಿತ್ಸೆ ಫಲಿಸದೆ ದುರ್ಮರಣ”

ಬೆಂಗಳೂರು: ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿಗೆ ಮಚ್ಚಿಯಿಂದ ಹಲ್ಲೆ ನಡೆಸಿದ ದಾರುಣ ಘಟನೆ ಯಶವಂತಪುರ ವಿಧಾನಸಭಾ ಕ್ಷೇತ್ರದ…

22 hours ago