ಮೈಸೂರು ನಗರದ ನಜರ್ಬಾದ್ ಠಾಣಾ ಪೊಲೀಸರು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಾಂಕ: ೨೦/೦೮/೨೦೨೨ ರಂದು ಆರೋಪಿಯನ್ನು ದಸ್ತಗಿರಿ ಮಾಡಿ ಆತನ ವಶದಿಂದ ಮೈಸೂರು ನಗರದ ನಜರ್ ಮೊಹಲ್ಲಾದ ಸರ್ಕಾರಿ ಶಿಕ್ಷಣ ಮಹಾ ವಿದ್ಯಾಲಯ ವಸಂತ್ ಮಹಲ್ನಲ್ಲಿ ಕಳುವಾಗಿದ್ದ ರೂ ೧,೭೧,೦೦೦/- ಬೆಲೆ ಬಾಳುವ ೨ ವೀಡಿಯೋ ಕ್ಯಾಮಾರಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ರವರಾದ ಶ್ರೀಮತಿ. ಗೀತ. ಎಂ.ಎಸ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ.ರವರಾದ ಶ್ರೀ ಶಶಿಧರ್.ಎಂ.ಎನ್ ರವರ ಉಸ್ತುವಾರಿಯಲ್ಲಿ ನಜರ್ಬಾದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಜೀವನ್.ಕೆ, ಪಿ.ಎಸ್.ಐಗಳಾದ ಕು: ವೈಶಾಲಿ ಎ ಬಿರಾದಾರ, ರಘು, ಪ್ರೋ.ಪಿ.ಎಸ್.ಐ ಗಳಾದ ಚಂದ್ರಶೇಖರ್ ಇಟಗಿ, ಮಾರುತಿ ಅಂತರಗಟ್ಟಿ ಹಾಗೂ ಸಿಬ್ಬಂದಿಯವರಾದ ಸತೀಶ್ಕುಮಾರ್.ಎಸ್, ಕಿರಣ್ ರಾಥೋಡ್, ಸಂತೋಷ್ ಕುಮಾರ್, ಸವಿತಾ ಬಸವರಾಜ ಮಾನಪ್ಪನವರ ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…