Latest

ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಅಂಗಾಂಗಗಳ ವಿಡಿಯೋ.

ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯ ಕ್ಲಿನಿಕ್​ನಲ್ಲಿ ನ್ಯಾಚುರೋಪತಿ, ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ ವೈದ್ಯ ವೆಂಕಟರಮಣ, ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ ಚಿಕಿತ್ಸೆ ಕೊಡುವ ನೆಪದಲ್ಲಿ ಬೇಕಂತಲೇ ಖಾಸಗಿ ಅಂಗಗಳಿಗೂ ಇಂಜೆಕ್ಷನ್​ ಕೊಡಲು ಮುಂದಾಗುತ್ತಿದ್ದ ಎಂದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.
ಇತ್ತೀಚಿಗೆ ಯುವತಿಯೊಬ್ಬರು ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಕ್ಲಿನಿಕ್​ಗೆ ತೆರಳಿದ್ದರು. ಆ ವೇಳೆ ಖಾಸಗಿ ಅಂಗಗಳಿಗೂ ಇಂಜೆಕ್ಷನ್ ನೀಡಲು ವೈದ್ಯ ಮುಂದಾಗಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಯ ಮೊಬೈಲ್​ಗೆ ತಾನು ಚಿಕಿತ್ಸೆ ಪಡೆದ ವಿಡಿಯೋ ಬಂದಿತ್ತು. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಯುವತಿಯ ಕಡೆಯವರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆಯೇ ವೈದ್ಯ ಆಂಧ್ರಕ್ಕೆ ಪರಾರಿಯಾಗಿದ್ದ.
ಆಂಧ್ರದ ಗುತ್ತಿ ಬಳಿ ವೈದ್ಯ ವೆಂಕಟರಮಣ ಸಿಕ್ಕಿಬಿದ್ದಿದ್ದು, ತನಿಖೆ ವೇಳೆ ವೈದ್ಯನ ಅಸಲಿ ಮುಖ ಬಯಲಾಗಿದೆ. ಅಲ್ಲದೇ ಪೊಲೀಸರು ಆರೋಪಿಯ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ನಡೆಸಿದಾಗ ವೈದ್ಯನ ಕೈಚಳಕದ ವಿಡಿಯೋಗಳು ಪತ್ತೆಯಾಗಿವೆ.
ಬೆಂಗಳೂರಿನ ಜಾಲಹಳ್ಳಿಯಲ್ಲಿ ದ್ವಿತೀಯ ಪಿಯುಸಿ ಓದಿದ್ದ ವೈದ್ಯ ವೆಂಕಟರಮಣ, ಮಾರತ್ತಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್​ ಆಗಿದ್ದ. 10 ವರ್ಷ ಕಮರ್ಷಿಯಲ್​ ಮ್ಯಾನೇಜರ್ ಆಗಿದ್ದ ವೆಂಕಟರಮಣ, ನಂತರ ಜಯನಗರದ ಖಾಸಗಿ ಕಾಲೇಜಿನಲ್ಲಿ 2 ವರ್ಷ ತರಬೇತಿ ಪಡೆದಿದ್ದ ವೆಂಕಟರಮಣ, 3-4 ವರ್ಷಗಳಿಂದ ಮನೆ ಬಳಿ ಅಕ್ಯೂಪಂಕ್ಚರ್ ಕ್ಲಿನಿಕ್​ ತೆರೆದಿದ್ದ. ಬಳಿಕ ಕ್ಲಿನಿಕ್​ಗೆ ಬರುವ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ. ಮೊಬೈಲ್​ನಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ವಿಕೃತಿ ಮೆರೆಯುತ್ತಿದ್ದ. ವೆಂಕಟರಮಣನನ್ನು ಬಂಧಿಸಿ ವೈದ್ಯನ ಮೊಬೈಲ್​ ಜಪ್ತಿ ಮಾಡಿದಾಗ ಬಹಳಷ್ಟು ವಿಡಿಯೋ ಇರುವುದು ಕಂಡುಬಂದಿವೆ.
ವೈದ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

55 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

57 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

58 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

60 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago