Latest

ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಅಂಗಾಂಗಗಳ ವಿಡಿಯೋ.

ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯ ಕ್ಲಿನಿಕ್​ನಲ್ಲಿ ನ್ಯಾಚುರೋಪತಿ, ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ ವೈದ್ಯ ವೆಂಕಟರಮಣ, ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ ಚಿಕಿತ್ಸೆ ಕೊಡುವ ನೆಪದಲ್ಲಿ ಬೇಕಂತಲೇ ಖಾಸಗಿ ಅಂಗಗಳಿಗೂ ಇಂಜೆಕ್ಷನ್​ ಕೊಡಲು ಮುಂದಾಗುತ್ತಿದ್ದ ಎಂದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.
ಇತ್ತೀಚಿಗೆ ಯುವತಿಯೊಬ್ಬರು ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಕ್ಲಿನಿಕ್​ಗೆ ತೆರಳಿದ್ದರು. ಆ ವೇಳೆ ಖಾಸಗಿ ಅಂಗಗಳಿಗೂ ಇಂಜೆಕ್ಷನ್ ನೀಡಲು ವೈದ್ಯ ಮುಂದಾಗಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಯ ಮೊಬೈಲ್​ಗೆ ತಾನು ಚಿಕಿತ್ಸೆ ಪಡೆದ ವಿಡಿಯೋ ಬಂದಿತ್ತು. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಯುವತಿಯ ಕಡೆಯವರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆಯೇ ವೈದ್ಯ ಆಂಧ್ರಕ್ಕೆ ಪರಾರಿಯಾಗಿದ್ದ.
ಆಂಧ್ರದ ಗುತ್ತಿ ಬಳಿ ವೈದ್ಯ ವೆಂಕಟರಮಣ ಸಿಕ್ಕಿಬಿದ್ದಿದ್ದು, ತನಿಖೆ ವೇಳೆ ವೈದ್ಯನ ಅಸಲಿ ಮುಖ ಬಯಲಾಗಿದೆ. ಅಲ್ಲದೇ ಪೊಲೀಸರು ಆರೋಪಿಯ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ನಡೆಸಿದಾಗ ವೈದ್ಯನ ಕೈಚಳಕದ ವಿಡಿಯೋಗಳು ಪತ್ತೆಯಾಗಿವೆ.
ಬೆಂಗಳೂರಿನ ಜಾಲಹಳ್ಳಿಯಲ್ಲಿ ದ್ವಿತೀಯ ಪಿಯುಸಿ ಓದಿದ್ದ ವೈದ್ಯ ವೆಂಕಟರಮಣ, ಮಾರತ್ತಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್​ ಆಗಿದ್ದ. 10 ವರ್ಷ ಕಮರ್ಷಿಯಲ್​ ಮ್ಯಾನೇಜರ್ ಆಗಿದ್ದ ವೆಂಕಟರಮಣ, ನಂತರ ಜಯನಗರದ ಖಾಸಗಿ ಕಾಲೇಜಿನಲ್ಲಿ 2 ವರ್ಷ ತರಬೇತಿ ಪಡೆದಿದ್ದ ವೆಂಕಟರಮಣ, 3-4 ವರ್ಷಗಳಿಂದ ಮನೆ ಬಳಿ ಅಕ್ಯೂಪಂಕ್ಚರ್ ಕ್ಲಿನಿಕ್​ ತೆರೆದಿದ್ದ. ಬಳಿಕ ಕ್ಲಿನಿಕ್​ಗೆ ಬರುವ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ. ಮೊಬೈಲ್​ನಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ವಿಕೃತಿ ಮೆರೆಯುತ್ತಿದ್ದ. ವೆಂಕಟರಮಣನನ್ನು ಬಂಧಿಸಿ ವೈದ್ಯನ ಮೊಬೈಲ್​ ಜಪ್ತಿ ಮಾಡಿದಾಗ ಬಹಳಷ್ಟು ವಿಡಿಯೋ ಇರುವುದು ಕಂಡುಬಂದಿವೆ.
ವೈದ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

5 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

5 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

5 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

5 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

5 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

21 hours ago