Latest

ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಅಂಗಾಂಗಗಳ ವಿಡಿಯೋ.

ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯ ಕ್ಲಿನಿಕ್​ನಲ್ಲಿ ನ್ಯಾಚುರೋಪತಿ, ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ ವೈದ್ಯ ವೆಂಕಟರಮಣ, ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ ಚಿಕಿತ್ಸೆ ಕೊಡುವ ನೆಪದಲ್ಲಿ ಬೇಕಂತಲೇ ಖಾಸಗಿ ಅಂಗಗಳಿಗೂ ಇಂಜೆಕ್ಷನ್​ ಕೊಡಲು ಮುಂದಾಗುತ್ತಿದ್ದ ಎಂದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.
ಇತ್ತೀಚಿಗೆ ಯುವತಿಯೊಬ್ಬರು ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಕ್ಲಿನಿಕ್​ಗೆ ತೆರಳಿದ್ದರು. ಆ ವೇಳೆ ಖಾಸಗಿ ಅಂಗಗಳಿಗೂ ಇಂಜೆಕ್ಷನ್ ನೀಡಲು ವೈದ್ಯ ಮುಂದಾಗಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಯ ಮೊಬೈಲ್​ಗೆ ತಾನು ಚಿಕಿತ್ಸೆ ಪಡೆದ ವಿಡಿಯೋ ಬಂದಿತ್ತು. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಯುವತಿಯ ಕಡೆಯವರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆಯೇ ವೈದ್ಯ ಆಂಧ್ರಕ್ಕೆ ಪರಾರಿಯಾಗಿದ್ದ.
ಆಂಧ್ರದ ಗುತ್ತಿ ಬಳಿ ವೈದ್ಯ ವೆಂಕಟರಮಣ ಸಿಕ್ಕಿಬಿದ್ದಿದ್ದು, ತನಿಖೆ ವೇಳೆ ವೈದ್ಯನ ಅಸಲಿ ಮುಖ ಬಯಲಾಗಿದೆ. ಅಲ್ಲದೇ ಪೊಲೀಸರು ಆರೋಪಿಯ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ನಡೆಸಿದಾಗ ವೈದ್ಯನ ಕೈಚಳಕದ ವಿಡಿಯೋಗಳು ಪತ್ತೆಯಾಗಿವೆ.
ಬೆಂಗಳೂರಿನ ಜಾಲಹಳ್ಳಿಯಲ್ಲಿ ದ್ವಿತೀಯ ಪಿಯುಸಿ ಓದಿದ್ದ ವೈದ್ಯ ವೆಂಕಟರಮಣ, ಮಾರತ್ತಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್​ ಆಗಿದ್ದ. 10 ವರ್ಷ ಕಮರ್ಷಿಯಲ್​ ಮ್ಯಾನೇಜರ್ ಆಗಿದ್ದ ವೆಂಕಟರಮಣ, ನಂತರ ಜಯನಗರದ ಖಾಸಗಿ ಕಾಲೇಜಿನಲ್ಲಿ 2 ವರ್ಷ ತರಬೇತಿ ಪಡೆದಿದ್ದ ವೆಂಕಟರಮಣ, 3-4 ವರ್ಷಗಳಿಂದ ಮನೆ ಬಳಿ ಅಕ್ಯೂಪಂಕ್ಚರ್ ಕ್ಲಿನಿಕ್​ ತೆರೆದಿದ್ದ. ಬಳಿಕ ಕ್ಲಿನಿಕ್​ಗೆ ಬರುವ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ. ಮೊಬೈಲ್​ನಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ವಿಕೃತಿ ಮೆರೆಯುತ್ತಿದ್ದ. ವೆಂಕಟರಮಣನನ್ನು ಬಂಧಿಸಿ ವೈದ್ಯನ ಮೊಬೈಲ್​ ಜಪ್ತಿ ಮಾಡಿದಾಗ ಬಹಳಷ್ಟು ವಿಡಿಯೋ ಇರುವುದು ಕಂಡುಬಂದಿವೆ.
ವೈದ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕತ್ತಿ ತೋರಿಸಿ ಮನೆಗೆ ನುಗ್ಗಿದ ದುಷ್ಕರ್ಮಿ; ₹3 ಲಕ್ಷ ಮೌಲ್ಯದ ತಾಳಿ ಸರ ಕಸಿದು ಪರಾರಿ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3…

50 seconds ago

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

4 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

4 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

23 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago