ಮನೆಯ ಮ್ಯೂಟೇಷನ್ ಪ್ರಕ್ರಿಯೆ ನಡೆಸಿಕೊಡುವ ಹೆಸರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ.
ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಅವರು ತಮ್ಮ ಮನೆಯ ಮ್ಯೂಟೇಷನ್ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಸಂಪರ್ಕಿಸಿದ್ದರು. ಈ ವೇಳೆ ಶಿವಕುಮಾರ್ ಹಾಗೂ ಅವರ ಸಹಚರ ಶರಣಯ್ಯ ಸ್ವಾಮಿ ಇಬ್ಬರೂ ಸೇರಿ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಲಂಚ ನೀಡಲು ಇಚ್ಛಿಸದ ಮಹಾದೇವ ಅವರು ಈ ಬಗ್ಗೆ ಬೀದರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ದೂರು ಆಧರಿಸಿ ಅಧಿಕಾರಿಗಳು ಉಚಿತವಾಗಿ ಬಲೆ ಬೀಸಿದ್ದು, ಮಂಗಳವಾರ ಲಂಚದ ಮೊತ್ತದ ಮೊದಲ ಹಂತವಾಗಿ ₹2.5 ಲಕ್ಷ ಹಣವನ್ನು ಸ್ವೀಕರಿಸುವ ಸಮಯದಲ್ಲಿ ದಾಳಿ ನಡೆಸಿದರು.
ಮರಕುಂದಾ ಗ್ರಾಮದ ಹೊರವಲಯದಲ್ಲಿರುವ ದಾಬಾದಲ್ಲಿ ಮಹಾದೇವರಿಂದ ₹2.5 ಲಕ್ಷ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಶಿವಕುಮಾರ್ ಹಾಗೂ ಶರಣಯ್ಯ ಸ್ವಾಮಿ ಅವರನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣವು ಸ್ಥಳೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…