Latest

ಪೋಡಿ ಮಾಡಿಸಿಕೊಳ್ಳಲು ಲಂಚ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ”

ಗುಡಿಬಂಡೆ (ಚಿಕ್ಕಬಳ್ಳಾಪುರ ಜಿಲ್ಲೆ): ತಾನು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವ ಹೆಸರಿನಲ್ಲಿ ರೈತರಿಂದ ಲಂಚ ವಸೂಲಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಇಲ್ಲಿನ ತಾಲ್ಲೂಕಿನಲ್ಲಿ ನಡೆದಿದೆ.

ಬೆಣ್ಣೆಪರ್ತಿ ಗ್ರಾಮದ ರೈತ ಶಿವಪ್ಪ ಹಾಗೂ ನಂಜುಂಡಪ್ಪ ಎಂಬುವರ ಸಂಬಂಧಿತ 78ನೇ ಸರ್ವೆ ನಂಬರ್‌ನ ಜಮೀನಿಗೆ ಸಂಬಂಧಿಸಿದವಾಗಿ ಪೋಡಿ ಹಾಗೂ ದುರಸ್ತಿ ಕಾರ್ಯಗಳನ್ನು ಮಾಡಲು ಅವರು ಹಲವು ತಿಂಗಳುಗಳಿಂದ ತಾಲ್ಲೂಕು ಕಚೇರಿಗೆ ಓಡಾಟ ಮಾಡುತ್ತಿದ್ದರು. ಸುಮಾರು 33 ವರ್ಷಗಳ ಹಿಂದೆ ಸರ್ಕಾರದಿಂದ ಮಂಜೂರಾದ ಈ ಜಮೀನಿನ ದಾಖಲೆಗಳನ್ನು ಡಿಜಿಟಲ್ ಆಗಿ ನವೀಕರಿಸದ ಕಾರಣ, ಕ್ರಮವಾಗಿ ಪೋಡಿ ಮಾಡಿಸಲು ರೈತರು ಮನವಿ ಮಾಡುತ್ತಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದರು.

ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳಿಲ್ಲ ಎಂಬುದನ್ನು ಮುಂದೂಡುತ್ತಾ ಕೆಲಸವನ್ನು ವಿಳಂಬಗೊಳಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ರೈತರಿಂದ ನೇರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಮನನೊಂದು ರೈತರ ಪೈಕಿ ಮಂಜುನಾಥ್ ಎಂಬುವವರು ತಮ್ಮ 2 ಎಕರೆ 10 ಗುಂಟೆ ಹಾಗೂ ಮತ್ತೊಬ್ಬ ರೈತ ಚಿಕ್ಕಪ್ಪ ಅವರ 2 ಎಕರೆ 10 ಗುಂಟೆ ಜಮೀನಿಗೆ ಸಂಬಂಧಿಸಿದ ದಾಖಲಾತಿಗಳನ್ನು ತಿದ್ದುಪಡಿ ಮಾಡಿಸಲು ಮುಂದಾಗಿದ್ದರು.

ಈ ವೇಳೆ 55 ಸಾವಿರ ರೂ. ಲಂಚವನ್ನು ಖಾಸಗಿ ಕಚೇರಿಯಲ್ಲಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಳದ ಡಿವೈಎಸ್ಪಿ ವೀರೇಂದ್ರ ಕುಮಾರ್.ಪಿ ಹಾಗೂ ಇನ್ಸ್ಪೆಕ್ಟರ್ ನಿರ್ಮಲ್ ನೇತೃತ್ವದ ತಂಡ ದಾಳಿ ನಡೆಸಿ ನಾಗರಾಜ್ ಅವರನ್ನು ಬಲೆ ಬೀಸಿತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಇಲಾಖೆ ಮುಂದಿನ ಹಂತದ ತನಿಖೆ ಮುಂದುವರೆಸಿದೆ. ಅಧಿಕಾರಿಗಳ ಲಂಚಾಂಶ ಪ್ರತ್ಯಕ್ಷವಾಗುತ್ತಿರುವ ಈ ಘಟನೆ, ಕಚೇರಿಗಳಲ್ಲಿ ನಡೆದುತ್ತಿರುವ ಅಕ್ರಮದ ವೈಚಿತ್ರ್ಯವನ್ನೇ ಹೊರಹಾಕಿದೆ.

ವರದಿ: ಅವಿನಾಶ್

nazeer ahamad

Recent Posts

ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗೀತಾ ಪಾಟೀಲ, ಪಿಐ ಸೀತಾರಾಮ ಅಮಾನತಿಗೆ ಆಗ್ರಹಿಸಿ ಬೀದಿಗಿಳಿದ ಸಾರ್ವಜನಿಕರು

ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ…

12 hours ago

ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್‌ನಲ್ಲಿ ಬಂದು ₹20 ಲಕ್ಷ ದರೋಡೆ

ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

20 hours ago

ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು

ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು,…

20 hours ago

ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…

1 day ago

ಅಧಿಕಾರಿಗೆ ಚಪ್ಪಲಿ ಏಟು: 20 ವರ್ಷವಾದರೂ ಭೂ ಪರಿಹಾರ ನೀಡದ ಬಾಗಲಕೋಟೆ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…

2 days ago

ಸಾರ್ವಜನಿಕರ ದೂರುಗಳ ಬೆನ್ನಲ್ಲೇ ದಾಸನಪುರ ಗ್ರಾಮ ಪಂಚಾಯಿತಿ ಪಿಡಿಓ ಉಷಾ ಅಮಾನತು

ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…

2 days ago