ಗುಡಿಬಂಡೆ (ಚಿಕ್ಕಬಳ್ಳಾಪುರ ಜಿಲ್ಲೆ): ತಾನು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವ ಹೆಸರಿನಲ್ಲಿ ರೈತರಿಂದ ಲಂಚ ವಸೂಲಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಇಲ್ಲಿನ ತಾಲ್ಲೂಕಿನಲ್ಲಿ ನಡೆದಿದೆ.
ಬೆಣ್ಣೆಪರ್ತಿ ಗ್ರಾಮದ ರೈತ ಶಿವಪ್ಪ ಹಾಗೂ ನಂಜುಂಡಪ್ಪ ಎಂಬುವರ ಸಂಬಂಧಿತ 78ನೇ ಸರ್ವೆ ನಂಬರ್ನ ಜಮೀನಿಗೆ ಸಂಬಂಧಿಸಿದವಾಗಿ ಪೋಡಿ ಹಾಗೂ ದುರಸ್ತಿ ಕಾರ್ಯಗಳನ್ನು ಮಾಡಲು ಅವರು ಹಲವು ತಿಂಗಳುಗಳಿಂದ ತಾಲ್ಲೂಕು ಕಚೇರಿಗೆ ಓಡಾಟ ಮಾಡುತ್ತಿದ್ದರು. ಸುಮಾರು 33 ವರ್ಷಗಳ ಹಿಂದೆ ಸರ್ಕಾರದಿಂದ ಮಂಜೂರಾದ ಈ ಜಮೀನಿನ ದಾಖಲೆಗಳನ್ನು ಡಿಜಿಟಲ್ ಆಗಿ ನವೀಕರಿಸದ ಕಾರಣ, ಕ್ರಮವಾಗಿ ಪೋಡಿ ಮಾಡಿಸಲು ರೈತರು ಮನವಿ ಮಾಡುತ್ತಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದರು.
ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳಿಲ್ಲ ಎಂಬುದನ್ನು ಮುಂದೂಡುತ್ತಾ ಕೆಲಸವನ್ನು ವಿಳಂಬಗೊಳಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ರೈತರಿಂದ ನೇರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಮನನೊಂದು ರೈತರ ಪೈಕಿ ಮಂಜುನಾಥ್ ಎಂಬುವವರು ತಮ್ಮ 2 ಎಕರೆ 10 ಗುಂಟೆ ಹಾಗೂ ಮತ್ತೊಬ್ಬ ರೈತ ಚಿಕ್ಕಪ್ಪ ಅವರ 2 ಎಕರೆ 10 ಗುಂಟೆ ಜಮೀನಿಗೆ ಸಂಬಂಧಿಸಿದ ದಾಖಲಾತಿಗಳನ್ನು ತಿದ್ದುಪಡಿ ಮಾಡಿಸಲು ಮುಂದಾಗಿದ್ದರು.
ಈ ವೇಳೆ 55 ಸಾವಿರ ರೂ. ಲಂಚವನ್ನು ಖಾಸಗಿ ಕಚೇರಿಯಲ್ಲಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಳದ ಡಿವೈಎಸ್ಪಿ ವೀರೇಂದ್ರ ಕುಮಾರ್.ಪಿ ಹಾಗೂ ಇನ್ಸ್ಪೆಕ್ಟರ್ ನಿರ್ಮಲ್ ನೇತೃತ್ವದ ತಂಡ ದಾಳಿ ನಡೆಸಿ ನಾಗರಾಜ್ ಅವರನ್ನು ಬಲೆ ಬೀಸಿತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಇಲಾಖೆ ಮುಂದಿನ ಹಂತದ ತನಿಖೆ ಮುಂದುವರೆಸಿದೆ. ಅಧಿಕಾರಿಗಳ ಲಂಚಾಂಶ ಪ್ರತ್ಯಕ್ಷವಾಗುತ್ತಿರುವ ಈ ಘಟನೆ, ಕಚೇರಿಗಳಲ್ಲಿ ನಡೆದುತ್ತಿರುವ ಅಕ್ರಮದ ವೈಚಿತ್ರ್ಯವನ್ನೇ ಹೊರಹಾಕಿದೆ.
ವರದಿ: ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…