Latest

ಪೋಡಿ ಮಾಡಿಸಿಕೊಳ್ಳಲು ಲಂಚ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ”

ಗುಡಿಬಂಡೆ (ಚಿಕ್ಕಬಳ್ಳಾಪುರ ಜಿಲ್ಲೆ): ತಾನು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವ ಹೆಸರಿನಲ್ಲಿ ರೈತರಿಂದ ಲಂಚ ವಸೂಲಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಇಲ್ಲಿನ ತಾಲ್ಲೂಕಿನಲ್ಲಿ ನಡೆದಿದೆ.

ಬೆಣ್ಣೆಪರ್ತಿ ಗ್ರಾಮದ ರೈತ ಶಿವಪ್ಪ ಹಾಗೂ ನಂಜುಂಡಪ್ಪ ಎಂಬುವರ ಸಂಬಂಧಿತ 78ನೇ ಸರ್ವೆ ನಂಬರ್‌ನ ಜಮೀನಿಗೆ ಸಂಬಂಧಿಸಿದವಾಗಿ ಪೋಡಿ ಹಾಗೂ ದುರಸ್ತಿ ಕಾರ್ಯಗಳನ್ನು ಮಾಡಲು ಅವರು ಹಲವು ತಿಂಗಳುಗಳಿಂದ ತಾಲ್ಲೂಕು ಕಚೇರಿಗೆ ಓಡಾಟ ಮಾಡುತ್ತಿದ್ದರು. ಸುಮಾರು 33 ವರ್ಷಗಳ ಹಿಂದೆ ಸರ್ಕಾರದಿಂದ ಮಂಜೂರಾದ ಈ ಜಮೀನಿನ ದಾಖಲೆಗಳನ್ನು ಡಿಜಿಟಲ್ ಆಗಿ ನವೀಕರಿಸದ ಕಾರಣ, ಕ್ರಮವಾಗಿ ಪೋಡಿ ಮಾಡಿಸಲು ರೈತರು ಮನವಿ ಮಾಡುತ್ತಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದರು.

ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳಿಲ್ಲ ಎಂಬುದನ್ನು ಮುಂದೂಡುತ್ತಾ ಕೆಲಸವನ್ನು ವಿಳಂಬಗೊಳಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ರೈತರಿಂದ ನೇರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಮನನೊಂದು ರೈತರ ಪೈಕಿ ಮಂಜುನಾಥ್ ಎಂಬುವವರು ತಮ್ಮ 2 ಎಕರೆ 10 ಗುಂಟೆ ಹಾಗೂ ಮತ್ತೊಬ್ಬ ರೈತ ಚಿಕ್ಕಪ್ಪ ಅವರ 2 ಎಕರೆ 10 ಗುಂಟೆ ಜಮೀನಿಗೆ ಸಂಬಂಧಿಸಿದ ದಾಖಲಾತಿಗಳನ್ನು ತಿದ್ದುಪಡಿ ಮಾಡಿಸಲು ಮುಂದಾಗಿದ್ದರು.

ಈ ವೇಳೆ 55 ಸಾವಿರ ರೂ. ಲಂಚವನ್ನು ಖಾಸಗಿ ಕಚೇರಿಯಲ್ಲಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಳದ ಡಿವೈಎಸ್ಪಿ ವೀರೇಂದ್ರ ಕುಮಾರ್.ಪಿ ಹಾಗೂ ಇನ್ಸ್ಪೆಕ್ಟರ್ ನಿರ್ಮಲ್ ನೇತೃತ್ವದ ತಂಡ ದಾಳಿ ನಡೆಸಿ ನಾಗರಾಜ್ ಅವರನ್ನು ಬಲೆ ಬೀಸಿತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಇಲಾಖೆ ಮುಂದಿನ ಹಂತದ ತನಿಖೆ ಮುಂದುವರೆಸಿದೆ. ಅಧಿಕಾರಿಗಳ ಲಂಚಾಂಶ ಪ್ರತ್ಯಕ್ಷವಾಗುತ್ತಿರುವ ಈ ಘಟನೆ, ಕಚೇರಿಗಳಲ್ಲಿ ನಡೆದುತ್ತಿರುವ ಅಕ್ರಮದ ವೈಚಿತ್ರ್ಯವನ್ನೇ ಹೊರಹಾಕಿದೆ.

ವರದಿ: ಅವಿನಾಶ್

nazeer ahamad

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

12 hours ago

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…

12 hours ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

18 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

22 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

23 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

23 hours ago