Latest

ನೀರಿಲ್ಲದೇ ಗ್ರಾಮಸ್ಥರು ಪರದಾಟ!

ಕುಂದಗೋಳ; ತಾಲೂಕಿನ ವಿವಿಧ ಗ್ರಾಮಗಳಿಗೆ ಬೇಸಗೆ ಬೇಗುದಿಗೆ ಕುಡಿಯಲು ನೀರು ಇಲ್ಲದೆ ಗ್ರಾಮಸ್ಥರು ನೀರಿನ ಬವಣೆಗೆ ರೋಸಿ ಹೊಗಿದ್ದಾರೆ.

ಹೌದು..! ಕಳೆದ ಬಾರಿ ಹಿಂದೆ ಕುಡಿಯುವ ನೀರು ಸ್ಥಗತಿಗೊಂಡಿತ್ತು, ಇವಾಗ ಮತ್ತೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೋಟರ್ ಕೆಟ್ಟ ಪರಿಣಾಮ ನೀರು ಸರಬರಾಜು ಸ್ಥಗತಿಗೊಂಡಿದೆ. ಇತ್ತ ಶುದ್ದ ನೀರಿಗಾಗಿ ಹಳ್ಳಿಗರು ಪಟ್ಟಣದ ಅತ್ತ ಮುಖ ಮಾಡಿದ್ದಾರೆ, ಕೆಲವೊಂದು ಗ್ರಾಮಸ್ಥರು ಗ್ರಾಮದ ಕೆರೆಗಳಿಗೆ, ರೈತರ ಜಮೀನುಗಳ ಕೃಷಿಹೊಂಡಕ್ಕೆ ತೆರಳಿ ಕೆರೆ ನೀರು ತರುತ್ತಿದ್ದಾರೆ. ಹೀಗಾಗಿ ನೀರಿನ ಸಮಸ್ಯೆಯ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ? ಅನ್ನುವುದು ಜನಸಾಮಾನ್ಯರ ಪ್ರಶ್ನೆ.

ಕುಡಿಯುವ ನೀರಿನ ಕೊರತೆ ವಿವಿಧ ಗ್ರಾಮಗಳಿಗೆ ನೀರಿನ ಸಮಸ್ಯೆ ತೆಲೆದೂರಿದೆ. ಗ್ರಾಮ ಗಳಾದ ಯರೇನಾರಾಯಣಪೂರ, ಯರಗುಪ್ಪಿ, ಚಿಕ್ಕನರ್ತಿ, ಹೀರೆನರ್ತಿ, ಬೆನಕನ ಹಳ್ಳಿ, ಕಡಪಟ್ಟ, ಅಲ್ಲಾಪೂರ, ರೊಟ್ಟಿಗವಾಡ, ಕೊಂಕಣ್ಣಕುರಹಟ್ಟಿ, ಚಾಕಲಬ್ಬಿ, ಸೇರಿದಂತೆ ಇತರೆ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳೂ ಏನು ಮಾಡುತ್ತಿದ್ದಾರೆ? ಅಂತ ಜನರು ಪ್ರಶ್ನೆ ಮಾಡ್ತಾ ಇದ್ದಾರೆ? ಇದ್ಯಾವುದೂಕ್ಕೂ ಉತ್ತರ ನೀಡದ ಅಧಿಕಾರಿಗಳು? ಜನ ನೀರಿಗಾಗಿ ತತ್ತಿರಿಸಿವಂತೆ ಮಾಡಿದೆ.

ಸರಕಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತಾ ಬಂದಿದೆ. ಅದರಂತೆ ಕಳೆದ ತಿಂಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ, ಗ್ರಾಮೀಣ ಕುಡಿಯುವ ನೀರಿನ ನೈರ್ಮಲ್ಯ ಇಲಾಖೆ ಕುಂದಗೋಳ ವಿಭಾಗದ ದಲ್ಲಿ ಈಗಾಗಲೇ ಯರೇನಾರಾಯಣಪೂರ ಇತರೆ 13 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ದುರಸ್ತಿಗೆ 4 ಲಕ್ಷ ರೂಪಾಯಿ ಅಂದಾಜು ವೆಚ್ಚ ಎಸ್ ಡಿ ಪಿ ಯೋಜನೆಡಿಯಲ್ಲಿ ದಿನಾಂಕ; 10/03/2023 ರಂದು ಭರಸಿಲಾಗಿದೆ. ಪುನಃ ಪುನಃ ಸಮಸ್ಯೆ ತೆಲೆದೊರಿದರು, ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ದೊರುತ್ತಿದ್ದಾರೆ. ಸರಕಾರ ಕುಡಿಯುವ ನೀರಿಗೆ ಕೊರತೆ ಉಂಟಾಗಬಾರದೆಂದು ಶಾಸನಬದ್ದ ಅನುದಾನದಡಿ ಯಲ್ಲಿ ಹಣ ಇರಿಸಲಾಗುತ್ತದೆ, ಆದರೆ ಸಮರ್ಪಕ ಬಳಿಕೆ ಏಕೆ ಆಗುತ್ತಿಲ್ಲ? ಯಾವಾಗ ನೋಡಿದರೂ ರಿಪೇರಿ ಅಂತ ಅಧಿಕಾರಿಗಳು ಹೇಳ್ತಾ ಮುಂದುವರೆಯುತ್ತ ಇದ್ದಾರೆ.

ಈ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನ ಸಂಪರ್ಕಸಿದಾಗ ಕುಂದಗೋಳ ಜಲ ಮಂಡಳಿಯಿಂದ ಟ್ಯಾಂಕರ್ ಮೂಲಕ ಶುದ್ದ ಘಟಕಕ್ಕೆ ನೀರು ಶೇಖರಿಸಿ, ತದನಂತರ ಶುದ್ದ ನೀರು ಪೂರೈಸುತ್ತವೆ. ಬಹುಗ್ರಾಮ ನೀರಿನ ಯೋಜನೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
-ಆರ್ ಟಿ ರತ್ನಾಕರ
ಯರಗುಪ್ಪಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈಗಾಗಲೇ ದುರಸ್ತಿಗೊಳಿಸಿಲಾಗಿದೆ. ಇನ್ನೇನು ಎರಡು ದಿನಗಳಲ್ಲಿ ನೀರು ಸರಬರಾಜು ಮಾಡುತ್ತೇವೆ.
– ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್
ಆಕಾಶ ವಂದೇ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕುಂದಗೋಳ

ಒಟ್ಟಿನಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು ಗ್ರಾಮಸ್ಥರ ಪರದಾಟ ಹೇಳತೀರದೂ ಕೂಡಲೇ ಗ್ರಾಮೀಣ ಕುಡಿಯುವ ನೀರಿನ ನೈರ್ಮಲ್ಯ ಇಲಾಖೆ ಜನರ ದಾಹ ನೀಗಸುತ್ತಾರ ಇಲ್ಲ ಕಾದು ನೋಡಬೇಕು

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

22 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

23 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

25 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

26 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

28 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

29 minutes ago