ಚಿಕ್ಕಮಗಳೂರು: ಕಡೂರು ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯೊಬ್ಬರು ಬಾಲ್ಯ ವಿವಾಹದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪರಿಣಾಮ, ಗ್ರಾಮಸ್ಥರು ಶಿಕ್ಷಕಿಯ ಕುಟುಂಬದ ವಿರುದ್ಧ ಸಾಮಾಜಿಕ ಬಹಿಷ್ಕಾರ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ತೇಜಸ್ವಿನಿ ಎಂಬ ಶಿಕ್ಷಕಿ, ಇತ್ತೀಚೆಗೆ ಗ್ರಾಮದಲ್ಲಿ ನಡೆಯಬೇಕಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹದ ಮಾಹಿತಿ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. ಇದರ ಪರಿಣಾಮವಾಗಿ ವಿವಾಹ ರದ್ದುಪಡಿಸಲಾಯಿತು ಹಾಗೂ ಬಾಲ್ಯ ವಿವಾಹಕ್ಕೆ ಕಾರಣರಾಗಿದ್ದ ಪೋಷಕರು ಮತ್ತು ವರನ ವಿರುದ್ಧ ಕಾನೂನು ಕ್ರಮವೂ ಜರುಗಿತು.
ಈ ಘಟನೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕಿ ಹಾಗೂ ಅವರ ಕುಟುಂಬದ ವಿರುದ್ಧ ಗ್ರಾಮಸ್ಥರು ಪಂಚಾಯತ್ ನಡೆಸಿ ದಂಡ ವಿಧಿಸಿದ್ದಾರೆ. ಅಲ್ಲದೆ, ಇವರಿಗೆ ಗ್ರಾಮದಲ್ಲಿನ ದೇವಾಲಯ ಪ್ರವೇಶ, ಸಾರ್ವಜನಿಕವಾಗಿ ಮಾತನಾಡುವುದು ಸೇರಿದಂತೆ ಎಲ್ಲರ ಜೊತೆಗೆ ಸಂಪರ್ಕಕ್ಕೆ ನಿರ್ಬಂಧ ವಿಧಿಸಿದ್ದಾರೆ.
ತೇಜಸ್ವಿನಿಯು ತಮ್ಮ ಹುದ್ದೆಯಿಂದ ಕೆಳಹರಡುಬೇಕು, ಇನ್ನು ಮುಂದೆ ಗ್ರಾಮದಲ್ಲಿ ಕೆಲಸ ಮಾಡುವಂತಿಲ್ಲ ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಜೊತೆಗೆ, ಅವರ ಕುಟುಂಬದವರೊಂದಿಗೆ ಯಾರಾದರೂ ಮಾತನಾಡಿದರೆ ಅವರಿಗೂ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಹೊರಡಿಸಿರುವುದು ಕೂಡ ತಿಳಿದು ಬಂದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…