ಕುಂದಗೋಳ; ತಾಲೂಕಿನ ಎಲ್ಲೆಡೆ ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ. ಇದೀಗ ಮುಂಗಾರು ಕೂಡ ವಿಳಂಬವಾದ ಹಿನ್ನೆಲೆಯಲ್ಲಿ ಅನ್ನದಾತರು ಆತಂಕಕ್ಕೆ ಒಳಗಾಗಿದ್ದಾರೆ, ಇನ್ನೂ ಕೆಲವಡೆ ರೈತರು ಮಳೆಗಾಗಿ ವಿಶೇಷ ಪೊಜೆಗಳನ್ನು ಮಾಡುತ್ತಲ್ಲೆ ಇದ್ದಾರೆ. ಹಾಗೇ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ನಿವಾಸಿಗಳು ಕಪ್ಪೆಗಳಿಗೆ ಮದುವೆ ಮಾಡಿದ ಘಟನೆಯೂ ನಡೆದಿದೆ.
ಹೌದು..! ಜೂನ ತಿಂಗಳು ಬಂದರೆ ಸಾಕು ರೈತರು ಮಳೆ ಬರುತ್ತೆದೆ ಎನ್ನುವ ನಿರೀಕ್ಷೆಯಲ್ಲಿ ಇರುತ್ತಾರೆ. ಆದರೆ ಇದೀಗ ಹದಿನೈದು ದಿನಗಳು ಕಳೆದರೂ ಮಳೆ ಮಾತ್ರ ಇನ್ನು ಪ್ರವೇಶ ಮಾಡಿಲ್ಲಿ. ಆದ್ದರಿಂದ ಕೆಲವೆಡೆ ರೈತರು ದೇವರು ಮೊರೆ ಹೋಗಿ ವಿಶೇಷ ಪೊಜಿಗಳು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ನಿವಾಸಿಗಳು ಮಳೆ ಬರಲಿ ಅಂತ ಕಪ್ಪೆಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದ್ದು, ಇಲ್ಲಿ ವಿಶೇಷವಾಗಿತ್ತು.
ಮಳೆ ಆಗಿಲ್ಲ ಅಂದರೆ ಆಗಿನ ಪೂರ್ವಜರು ಕಪ್ಪೆಗಳಿಗೆ ಮದುವೆ ಮಾಡುತ್ತಿದ್ದರು, ಇಂದು ಕೂಡ ಅದೇ ಕಾರ್ಯ ಮುಂದುವರಿತ್ತೂ ಬಂದಿದೆ ಅದರಂತೆ ಕುಂದಗೋಳ ಪಟ್ಟಣದ ಕಾಳಿದಾಸ ನಗರದಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಯಿತ್ತು. ಮನುಷ್ಯರ ಮದುವೆ ಹೇಗೆ ನಡೆಯಿತ್ತು ಹಾಗೆ ಮುತ್ತೈದೆಯ ರಿಗೆ ಉಡಿ ತುಂಬುವುದು, ಮನುಷ್ಯರ ಕೈಗಳಿಗೆ ಕಂಕಣ ಕಟುತ್ತಾರೂ ಹಾಗೇ ಕಪ್ಪೆಗಳಿಗೆ ಕಂಕಣ ಕಟ್ಟಿ, ಕೆರೆ ನಿರ್ಮಿಸಿ, ಕಡಪಟ್ಟ ರಸ್ತೆಯಲ್ಲಿರುವ ಯಲ್ಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ. ಮಳೆಗಾಗಿ ಪ್ರಾಥಿಸಿದರು.
ಒಟ್ಟಾರೆಯಾಗಿ ಹೇಳುವುದಾದರೆ ರೈತಾಪಿ ವರ್ಗದ ಈ ಪ್ರಾರ್ಥನೆಯಿಂದ ವರುಣ ದೇವ ನಾಡಿನ ತುಂಬೆಲ್ಲಾ ಕೃಪೆ ತೋರೆಲಿ ಅನ್ನುವುದು ರೈತಾರ ಆಶಯ.
ವರದಿ; ಶಾನು ಯಲಿಗಾರ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…