ಕುಂದಗೋಳ; ತಾಲೂಕಿನ ಎಲ್ಲೆಡೆ ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ. ಇದೀಗ ಮುಂಗಾರು ಕೂಡ ವಿಳಂಬವಾದ ಹಿನ್ನೆಲೆಯಲ್ಲಿ ಅನ್ನದಾತರು ಆತಂಕಕ್ಕೆ ಒಳಗಾಗಿದ್ದಾರೆ, ಇನ್ನೂ ಕೆಲವಡೆ ರೈತರು ಮಳೆಗಾಗಿ ವಿಶೇಷ ಪೊಜೆಗಳನ್ನು ಮಾಡುತ್ತಲ್ಲೆ ಇದ್ದಾರೆ. ಹಾಗೇ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ನಿವಾಸಿಗಳು ಕಪ್ಪೆಗಳಿಗೆ ಮದುವೆ ಮಾಡಿದ ಘಟನೆಯೂ ನಡೆದಿದೆ.
ಹೌದು..! ಜೂನ ತಿಂಗಳು ಬಂದರೆ ಸಾಕು ರೈತರು ಮಳೆ ಬರುತ್ತೆದೆ ಎನ್ನುವ ನಿರೀಕ್ಷೆಯಲ್ಲಿ ಇರುತ್ತಾರೆ. ಆದರೆ ಇದೀಗ ಹದಿನೈದು ದಿನಗಳು ಕಳೆದರೂ ಮಳೆ ಮಾತ್ರ ಇನ್ನು ಪ್ರವೇಶ ಮಾಡಿಲ್ಲಿ. ಆದ್ದರಿಂದ ಕೆಲವೆಡೆ ರೈತರು ದೇವರು ಮೊರೆ ಹೋಗಿ ವಿಶೇಷ ಪೊಜಿಗಳು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ನಿವಾಸಿಗಳು ಮಳೆ ಬರಲಿ ಅಂತ ಕಪ್ಪೆಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದ್ದು, ಇಲ್ಲಿ ವಿಶೇಷವಾಗಿತ್ತು.
ಮಳೆ ಆಗಿಲ್ಲ ಅಂದರೆ ಆಗಿನ ಪೂರ್ವಜರು ಕಪ್ಪೆಗಳಿಗೆ ಮದುವೆ ಮಾಡುತ್ತಿದ್ದರು, ಇಂದು ಕೂಡ ಅದೇ ಕಾರ್ಯ ಮುಂದುವರಿತ್ತೂ ಬಂದಿದೆ ಅದರಂತೆ ಕುಂದಗೋಳ ಪಟ್ಟಣದ ಕಾಳಿದಾಸ ನಗರದಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಯಿತ್ತು. ಮನುಷ್ಯರ ಮದುವೆ ಹೇಗೆ ನಡೆಯಿತ್ತು ಹಾಗೆ ಮುತ್ತೈದೆಯ ರಿಗೆ ಉಡಿ ತುಂಬುವುದು, ಮನುಷ್ಯರ ಕೈಗಳಿಗೆ ಕಂಕಣ ಕಟುತ್ತಾರೂ ಹಾಗೇ ಕಪ್ಪೆಗಳಿಗೆ ಕಂಕಣ ಕಟ್ಟಿ, ಕೆರೆ ನಿರ್ಮಿಸಿ, ಕಡಪಟ್ಟ ರಸ್ತೆಯಲ್ಲಿರುವ ಯಲ್ಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ. ಮಳೆಗಾಗಿ ಪ್ರಾಥಿಸಿದರು.
ಒಟ್ಟಾರೆಯಾಗಿ ಹೇಳುವುದಾದರೆ ರೈತಾಪಿ ವರ್ಗದ ಈ ಪ್ರಾರ್ಥನೆಯಿಂದ ವರುಣ ದೇವ ನಾಡಿನ ತುಂಬೆಲ್ಲಾ ಕೃಪೆ ತೋರೆಲಿ ಅನ್ನುವುದು ರೈತಾರ ಆಶಯ.
ವರದಿ; ಶಾನು ಯಲಿಗಾರ
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…