Latest

ನೀರಿಗಾಗಿ ಗ್ರಾಮಸ್ಥರ ಪರದಾಟ; ಕೈ ಹಿಡಿಯದ ಜಲ ಜೀವನ್ ಮಿಷನ್!

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕೆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಳ್ಳಿಕೆರೆ ಗ್ರಾಮದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಜನರು ಕುಡಿಯಲು ಹಾಗೂ ಬಳಸಲು ನೀರಿಲ್ಲದೇ ದಿನನಿತ್ಯ ಪರದಾಡುವ ಸ್ಥಿತಿ ಉಂಟಾಗಿದೆ. ನೀರಿನ ಸಮಸ್ಯೆ ನೀಗಿಸಲು ಜಲ ಜೀವನ್ ಮಿಷನ್ ಕಾಮಗಾರಿ ಆಗಮಿಸಿದ್ದು, ಜನರಿಗೆ ಜೆಜೆಎಂ ಕಾಮಗಾರಿ ಕೈ ಹಿಡಿಯುತ್ತದೆ ಎಂದುಕೊಂಡಿದ್ದರು, ಆದರೆ ಅದು ಕೂಡ ಕೈ ಹಿಡಿಯಲಿಲ್ಲ, ಜೆಜೆಎಂ ಕಾಮಗಾರಿ ಸಂಪೂರ್ಣ ಹಳ್ಳ ಹಿಡಿದು ಹೋಗಿರುವುದು ಕಂಡುಬರುತ್ತದೆ. ಇಲ್ಲಿನ ಗ್ರಾಮದ ಜನರು ದಿನನಿತ್ಯ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ, ದೇಶದ ಪ್ರತಿ ಹಳ್ಳಿಗೂ ನಿರಂತರ ಶುದ್ಧ ಕುಡಿಯುವ ನೀರು ಕಲ್ಪಿಸುವ ಮಹತ್ವಾಕಾಂಕ್ಷಿ ಉದ್ದೇಶದೊಂದಿಗೆ ಆರಂಭಗೊಂಡಿರುವ ಜಲ ಜೀವನ್ ಮಿಷನ್‌ನ(ಜೆಜೆಎಮ್) ಯೋಜನೆ ಪ್ರತಿ ಗ್ರಾಮದಲ್ಲಿಯೂ ಕಾಮಗಾರಿ ನಡೆಯುತ್ತಿದ್ದು, ಅದೇ ರೀತಿ ತಳ್ಳಿಕೆರೆ ಗ್ರಾಮದಲ್ಲಿಯೂ ಕಾಮಗಾರಿ ನಡೆದಿರುತ್ತದೆ, ಕಾಮಗಾರಿ ನಡೆದ ಆ ಸಮಯದ ಸ್ಥಳದಲ್ಲಿ ಹಾಕಿದ ಬೋರ್ಡ್ ನಲ್ಲಿ ಜಿಲ್ಲಾ ಪಂಚಾಯತ್ ಬಾಗಲಕೋಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಬಾಗಲಕೋಟೆನ ಮೂಲಕ ಕೇಲೂರು ಗ್ರಾಮ ಪಂಚಾಯತಿಯ ತಳ್ಳಿಕೆರೆ ಗ್ರಾಮದ ಜನವಸತಿ ಪ್ರದೇಶದ 386 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಕಲ್ಪಿಸುವ ಯೋಜನೆ ಹೊಂದಿದ್ದು,ಕಾಮಗಾರಿಯ ಅಂದಾಜು ಮೊತ್ತ,64 ಲಕ್ಷ 80 ಸಾವಿರ ರೂಪಾಯಿ ಒಳಗೊಂಡಿರುತ್ತದೆ, ತಳ್ಳಿಕೆರೆ ಗ್ರಾಮದ ಜನತೆ ಕಳೆದ ಎರಡು ವರ್ಷಗಳಿಂದ ಮನೆ ಮನೆಗೆ ಗಂಗೆ ಇನ್ನೂ ತಲುಪದೇ ಇರುವುದು ಜನರಲ್ಲಿ ಅಸಮಾಧಾನ ಉಂಟು ಮಾಡಿದೆ. ಗ್ರಾಮದ ಕೆಲ ಪ್ರದೇಶಗಳಲ್ಲಿ ಮಾತ್ರ ಕೆಲಸ ಮಾಡಿ ಅದರಲ್ಲೂ ಸ್ವಲ್ಪವೂ ಕಾಮಗಾರಿಯ ಪೂರ್ಣತೆ ಕಂಡಿರುವುದಿಲ್ಲ, ನಳಗಳನ್ನು ಅಳವಡಿಸಿಲ್ಲ. ಕಾಮಗಾರಿಯ ಬೋರ್ಡ್ ಅನ್ನು ಎರಡು ದಿನ ಮಾತ್ರ ಹಾಕಿ ನಂತರ ಅದನ್ನು ತಾವೇ ಕಿತ್ತುಕೊಂಡು ಹೋಗಿದ್ದಾರೆ ಎಂಬುದು ಅಲ್ಲಿನ ಜನರ ಪಿಸು ಮಾತಾಗಿದೆ, ಇದರಿಂದ ಜೆಜೆಎಂ ಕಾಮಗಾರಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಇದರ ಸಲುವಾಗಿ ಗ್ರಾಮದ ಜನರು ಹಲವು ಬಾರಿ ಇದರ ಬಗ್ಗೆ ತಿಳಿಸಿದರು ಯಾವೊಬ್ಬ ಅಧಿಕಾರಿಯೂ ಇದಕ್ಕೆ ಸ್ಪಂದಿಸುತ್ತಿಲ್ಲ, ತಳ್ಳಿಕೇರೆ ಗ್ರಾಮದ ಜನರು ಜೆಜೆಎಂ ಕಾಮಗಾರಿ ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಇದರಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರಾದ ವೀರೇಶ ನಾಗರಬೇಂಚಿ ಹಾಗೂ ಇಂಜಿನಿಯರ್ ಆದ ಕಾಶಿರಾಯ್ ನಾಯಕ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರ ಮೇಲೆ ಸೂಕ್ತ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಗ್ರಾಮದ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು, ಹಾಗೂ ತಳ್ಳಿಕೆರೆ ಗ್ರಾಮದ ಜನರಿಗೆ ನೀರಿನ ಸೌಲಭ್ಯ ಒದಗಿಸಿ ಕೊಡಬೇಕು.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago