Latest

ನೀರಿಗಾಗಿ ಗ್ರಾಮಸ್ಥರ ಪರದಾಟ; ಕೈ ಹಿಡಿಯದ ಜಲ ಜೀವನ್ ಮಿಷನ್!

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕೆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಳ್ಳಿಕೆರೆ ಗ್ರಾಮದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಜನರು ಕುಡಿಯಲು ಹಾಗೂ ಬಳಸಲು ನೀರಿಲ್ಲದೇ ದಿನನಿತ್ಯ ಪರದಾಡುವ ಸ್ಥಿತಿ ಉಂಟಾಗಿದೆ. ನೀರಿನ ಸಮಸ್ಯೆ ನೀಗಿಸಲು ಜಲ ಜೀವನ್ ಮಿಷನ್ ಕಾಮಗಾರಿ ಆಗಮಿಸಿದ್ದು, ಜನರಿಗೆ ಜೆಜೆಎಂ ಕಾಮಗಾರಿ ಕೈ ಹಿಡಿಯುತ್ತದೆ ಎಂದುಕೊಂಡಿದ್ದರು, ಆದರೆ ಅದು ಕೂಡ ಕೈ ಹಿಡಿಯಲಿಲ್ಲ, ಜೆಜೆಎಂ ಕಾಮಗಾರಿ ಸಂಪೂರ್ಣ ಹಳ್ಳ ಹಿಡಿದು ಹೋಗಿರುವುದು ಕಂಡುಬರುತ್ತದೆ. ಇಲ್ಲಿನ ಗ್ರಾಮದ ಜನರು ದಿನನಿತ್ಯ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ, ದೇಶದ ಪ್ರತಿ ಹಳ್ಳಿಗೂ ನಿರಂತರ ಶುದ್ಧ ಕುಡಿಯುವ ನೀರು ಕಲ್ಪಿಸುವ ಮಹತ್ವಾಕಾಂಕ್ಷಿ ಉದ್ದೇಶದೊಂದಿಗೆ ಆರಂಭಗೊಂಡಿರುವ ಜಲ ಜೀವನ್ ಮಿಷನ್‌ನ(ಜೆಜೆಎಮ್) ಯೋಜನೆ ಪ್ರತಿ ಗ್ರಾಮದಲ್ಲಿಯೂ ಕಾಮಗಾರಿ ನಡೆಯುತ್ತಿದ್ದು, ಅದೇ ರೀತಿ ತಳ್ಳಿಕೆರೆ ಗ್ರಾಮದಲ್ಲಿಯೂ ಕಾಮಗಾರಿ ನಡೆದಿರುತ್ತದೆ, ಕಾಮಗಾರಿ ನಡೆದ ಆ ಸಮಯದ ಸ್ಥಳದಲ್ಲಿ ಹಾಕಿದ ಬೋರ್ಡ್ ನಲ್ಲಿ ಜಿಲ್ಲಾ ಪಂಚಾಯತ್ ಬಾಗಲಕೋಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಬಾಗಲಕೋಟೆನ ಮೂಲಕ ಕೇಲೂರು ಗ್ರಾಮ ಪಂಚಾಯತಿಯ ತಳ್ಳಿಕೆರೆ ಗ್ರಾಮದ ಜನವಸತಿ ಪ್ರದೇಶದ 386 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಕಲ್ಪಿಸುವ ಯೋಜನೆ ಹೊಂದಿದ್ದು,ಕಾಮಗಾರಿಯ ಅಂದಾಜು ಮೊತ್ತ,64 ಲಕ್ಷ 80 ಸಾವಿರ ರೂಪಾಯಿ ಒಳಗೊಂಡಿರುತ್ತದೆ, ತಳ್ಳಿಕೆರೆ ಗ್ರಾಮದ ಜನತೆ ಕಳೆದ ಎರಡು ವರ್ಷಗಳಿಂದ ಮನೆ ಮನೆಗೆ ಗಂಗೆ ಇನ್ನೂ ತಲುಪದೇ ಇರುವುದು ಜನರಲ್ಲಿ ಅಸಮಾಧಾನ ಉಂಟು ಮಾಡಿದೆ. ಗ್ರಾಮದ ಕೆಲ ಪ್ರದೇಶಗಳಲ್ಲಿ ಮಾತ್ರ ಕೆಲಸ ಮಾಡಿ ಅದರಲ್ಲೂ ಸ್ವಲ್ಪವೂ ಕಾಮಗಾರಿಯ ಪೂರ್ಣತೆ ಕಂಡಿರುವುದಿಲ್ಲ, ನಳಗಳನ್ನು ಅಳವಡಿಸಿಲ್ಲ. ಕಾಮಗಾರಿಯ ಬೋರ್ಡ್ ಅನ್ನು ಎರಡು ದಿನ ಮಾತ್ರ ಹಾಕಿ ನಂತರ ಅದನ್ನು ತಾವೇ ಕಿತ್ತುಕೊಂಡು ಹೋಗಿದ್ದಾರೆ ಎಂಬುದು ಅಲ್ಲಿನ ಜನರ ಪಿಸು ಮಾತಾಗಿದೆ, ಇದರಿಂದ ಜೆಜೆಎಂ ಕಾಮಗಾರಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಇದರ ಸಲುವಾಗಿ ಗ್ರಾಮದ ಜನರು ಹಲವು ಬಾರಿ ಇದರ ಬಗ್ಗೆ ತಿಳಿಸಿದರು ಯಾವೊಬ್ಬ ಅಧಿಕಾರಿಯೂ ಇದಕ್ಕೆ ಸ್ಪಂದಿಸುತ್ತಿಲ್ಲ, ತಳ್ಳಿಕೇರೆ ಗ್ರಾಮದ ಜನರು ಜೆಜೆಎಂ ಕಾಮಗಾರಿ ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಇದರಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರಾದ ವೀರೇಶ ನಾಗರಬೇಂಚಿ ಹಾಗೂ ಇಂಜಿನಿಯರ್ ಆದ ಕಾಶಿರಾಯ್ ನಾಯಕ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರ ಮೇಲೆ ಸೂಕ್ತ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಗ್ರಾಮದ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು, ಹಾಗೂ ತಳ್ಳಿಕೆರೆ ಗ್ರಾಮದ ಜನರಿಗೆ ನೀರಿನ ಸೌಲಭ್ಯ ಒದಗಿಸಿ ಕೊಡಬೇಕು.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago