Latest

ನೀರಿಗಾಗಿ ಗ್ರಾಮಸ್ಥರ ಪರದಾಟ; ಕೈ ಹಿಡಿಯದ ಜಲ ಜೀವನ್ ಮಿಷನ್!

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕೆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಳ್ಳಿಕೆರೆ ಗ್ರಾಮದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಜನರು ಕುಡಿಯಲು ಹಾಗೂ ಬಳಸಲು ನೀರಿಲ್ಲದೇ ದಿನನಿತ್ಯ ಪರದಾಡುವ ಸ್ಥಿತಿ ಉಂಟಾಗಿದೆ. ನೀರಿನ ಸಮಸ್ಯೆ ನೀಗಿಸಲು ಜಲ ಜೀವನ್ ಮಿಷನ್ ಕಾಮಗಾರಿ ಆಗಮಿಸಿದ್ದು, ಜನರಿಗೆ ಜೆಜೆಎಂ ಕಾಮಗಾರಿ ಕೈ ಹಿಡಿಯುತ್ತದೆ ಎಂದುಕೊಂಡಿದ್ದರು, ಆದರೆ ಅದು ಕೂಡ ಕೈ ಹಿಡಿಯಲಿಲ್ಲ, ಜೆಜೆಎಂ ಕಾಮಗಾರಿ ಸಂಪೂರ್ಣ ಹಳ್ಳ ಹಿಡಿದು ಹೋಗಿರುವುದು ಕಂಡುಬರುತ್ತದೆ. ಇಲ್ಲಿನ ಗ್ರಾಮದ ಜನರು ದಿನನಿತ್ಯ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ, ದೇಶದ ಪ್ರತಿ ಹಳ್ಳಿಗೂ ನಿರಂತರ ಶುದ್ಧ ಕುಡಿಯುವ ನೀರು ಕಲ್ಪಿಸುವ ಮಹತ್ವಾಕಾಂಕ್ಷಿ ಉದ್ದೇಶದೊಂದಿಗೆ ಆರಂಭಗೊಂಡಿರುವ ಜಲ ಜೀವನ್ ಮಿಷನ್‌ನ(ಜೆಜೆಎಮ್) ಯೋಜನೆ ಪ್ರತಿ ಗ್ರಾಮದಲ್ಲಿಯೂ ಕಾಮಗಾರಿ ನಡೆಯುತ್ತಿದ್ದು, ಅದೇ ರೀತಿ ತಳ್ಳಿಕೆರೆ ಗ್ರಾಮದಲ್ಲಿಯೂ ಕಾಮಗಾರಿ ನಡೆದಿರುತ್ತದೆ, ಕಾಮಗಾರಿ ನಡೆದ ಆ ಸಮಯದ ಸ್ಥಳದಲ್ಲಿ ಹಾಕಿದ ಬೋರ್ಡ್ ನಲ್ಲಿ ಜಿಲ್ಲಾ ಪಂಚಾಯತ್ ಬಾಗಲಕೋಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಬಾಗಲಕೋಟೆನ ಮೂಲಕ ಕೇಲೂರು ಗ್ರಾಮ ಪಂಚಾಯತಿಯ ತಳ್ಳಿಕೆರೆ ಗ್ರಾಮದ ಜನವಸತಿ ಪ್ರದೇಶದ 386 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಕಲ್ಪಿಸುವ ಯೋಜನೆ ಹೊಂದಿದ್ದು,ಕಾಮಗಾರಿಯ ಅಂದಾಜು ಮೊತ್ತ,64 ಲಕ್ಷ 80 ಸಾವಿರ ರೂಪಾಯಿ ಒಳಗೊಂಡಿರುತ್ತದೆ, ತಳ್ಳಿಕೆರೆ ಗ್ರಾಮದ ಜನತೆ ಕಳೆದ ಎರಡು ವರ್ಷಗಳಿಂದ ಮನೆ ಮನೆಗೆ ಗಂಗೆ ಇನ್ನೂ ತಲುಪದೇ ಇರುವುದು ಜನರಲ್ಲಿ ಅಸಮಾಧಾನ ಉಂಟು ಮಾಡಿದೆ. ಗ್ರಾಮದ ಕೆಲ ಪ್ರದೇಶಗಳಲ್ಲಿ ಮಾತ್ರ ಕೆಲಸ ಮಾಡಿ ಅದರಲ್ಲೂ ಸ್ವಲ್ಪವೂ ಕಾಮಗಾರಿಯ ಪೂರ್ಣತೆ ಕಂಡಿರುವುದಿಲ್ಲ, ನಳಗಳನ್ನು ಅಳವಡಿಸಿಲ್ಲ. ಕಾಮಗಾರಿಯ ಬೋರ್ಡ್ ಅನ್ನು ಎರಡು ದಿನ ಮಾತ್ರ ಹಾಕಿ ನಂತರ ಅದನ್ನು ತಾವೇ ಕಿತ್ತುಕೊಂಡು ಹೋಗಿದ್ದಾರೆ ಎಂಬುದು ಅಲ್ಲಿನ ಜನರ ಪಿಸು ಮಾತಾಗಿದೆ, ಇದರಿಂದ ಜೆಜೆಎಂ ಕಾಮಗಾರಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಇದರ ಸಲುವಾಗಿ ಗ್ರಾಮದ ಜನರು ಹಲವು ಬಾರಿ ಇದರ ಬಗ್ಗೆ ತಿಳಿಸಿದರು ಯಾವೊಬ್ಬ ಅಧಿಕಾರಿಯೂ ಇದಕ್ಕೆ ಸ್ಪಂದಿಸುತ್ತಿಲ್ಲ, ತಳ್ಳಿಕೇರೆ ಗ್ರಾಮದ ಜನರು ಜೆಜೆಎಂ ಕಾಮಗಾರಿ ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಇದರಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರಾದ ವೀರೇಶ ನಾಗರಬೇಂಚಿ ಹಾಗೂ ಇಂಜಿನಿಯರ್ ಆದ ಕಾಶಿರಾಯ್ ನಾಯಕ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರ ಮೇಲೆ ಸೂಕ್ತ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಗ್ರಾಮದ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು, ಹಾಗೂ ತಳ್ಳಿಕೆರೆ ಗ್ರಾಮದ ಜನರಿಗೆ ನೀರಿನ ಸೌಲಭ್ಯ ಒದಗಿಸಿ ಕೊಡಬೇಕು.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago