Latest

ನೀರಿಗಾಗಿ ಗ್ರಾಮಸ್ಥರ ಪರದಾಟ; ಕೈ ಹಿಡಿಯದ ಜಲ ಜೀವನ್ ಮಿಷನ್!

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕೆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಳ್ಳಿಕೆರೆ ಗ್ರಾಮದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಜನರು ಕುಡಿಯಲು ಹಾಗೂ ಬಳಸಲು ನೀರಿಲ್ಲದೇ ದಿನನಿತ್ಯ ಪರದಾಡುವ ಸ್ಥಿತಿ ಉಂಟಾಗಿದೆ. ನೀರಿನ ಸಮಸ್ಯೆ ನೀಗಿಸಲು ಜಲ ಜೀವನ್ ಮಿಷನ್ ಕಾಮಗಾರಿ ಆಗಮಿಸಿದ್ದು, ಜನರಿಗೆ ಜೆಜೆಎಂ ಕಾಮಗಾರಿ ಕೈ ಹಿಡಿಯುತ್ತದೆ ಎಂದುಕೊಂಡಿದ್ದರು, ಆದರೆ ಅದು ಕೂಡ ಕೈ ಹಿಡಿಯಲಿಲ್ಲ, ಜೆಜೆಎಂ ಕಾಮಗಾರಿ ಸಂಪೂರ್ಣ ಹಳ್ಳ ಹಿಡಿದು ಹೋಗಿರುವುದು ಕಂಡುಬರುತ್ತದೆ. ಇಲ್ಲಿನ ಗ್ರಾಮದ ಜನರು ದಿನನಿತ್ಯ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ, ದೇಶದ ಪ್ರತಿ ಹಳ್ಳಿಗೂ ನಿರಂತರ ಶುದ್ಧ ಕುಡಿಯುವ ನೀರು ಕಲ್ಪಿಸುವ ಮಹತ್ವಾಕಾಂಕ್ಷಿ ಉದ್ದೇಶದೊಂದಿಗೆ ಆರಂಭಗೊಂಡಿರುವ ಜಲ ಜೀವನ್ ಮಿಷನ್‌ನ(ಜೆಜೆಎಮ್) ಯೋಜನೆ ಪ್ರತಿ ಗ್ರಾಮದಲ್ಲಿಯೂ ಕಾಮಗಾರಿ ನಡೆಯುತ್ತಿದ್ದು, ಅದೇ ರೀತಿ ತಳ್ಳಿಕೆರೆ ಗ್ರಾಮದಲ್ಲಿಯೂ ಕಾಮಗಾರಿ ನಡೆದಿರುತ್ತದೆ, ಕಾಮಗಾರಿ ನಡೆದ ಆ ಸಮಯದ ಸ್ಥಳದಲ್ಲಿ ಹಾಕಿದ ಬೋರ್ಡ್ ನಲ್ಲಿ ಜಿಲ್ಲಾ ಪಂಚಾಯತ್ ಬಾಗಲಕೋಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಬಾಗಲಕೋಟೆನ ಮೂಲಕ ಕೇಲೂರು ಗ್ರಾಮ ಪಂಚಾಯತಿಯ ತಳ್ಳಿಕೆರೆ ಗ್ರಾಮದ ಜನವಸತಿ ಪ್ರದೇಶದ 386 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಕಲ್ಪಿಸುವ ಯೋಜನೆ ಹೊಂದಿದ್ದು,ಕಾಮಗಾರಿಯ ಅಂದಾಜು ಮೊತ್ತ,64 ಲಕ್ಷ 80 ಸಾವಿರ ರೂಪಾಯಿ ಒಳಗೊಂಡಿರುತ್ತದೆ, ತಳ್ಳಿಕೆರೆ ಗ್ರಾಮದ ಜನತೆ ಕಳೆದ ಎರಡು ವರ್ಷಗಳಿಂದ ಮನೆ ಮನೆಗೆ ಗಂಗೆ ಇನ್ನೂ ತಲುಪದೇ ಇರುವುದು ಜನರಲ್ಲಿ ಅಸಮಾಧಾನ ಉಂಟು ಮಾಡಿದೆ. ಗ್ರಾಮದ ಕೆಲ ಪ್ರದೇಶಗಳಲ್ಲಿ ಮಾತ್ರ ಕೆಲಸ ಮಾಡಿ ಅದರಲ್ಲೂ ಸ್ವಲ್ಪವೂ ಕಾಮಗಾರಿಯ ಪೂರ್ಣತೆ ಕಂಡಿರುವುದಿಲ್ಲ, ನಳಗಳನ್ನು ಅಳವಡಿಸಿಲ್ಲ. ಕಾಮಗಾರಿಯ ಬೋರ್ಡ್ ಅನ್ನು ಎರಡು ದಿನ ಮಾತ್ರ ಹಾಕಿ ನಂತರ ಅದನ್ನು ತಾವೇ ಕಿತ್ತುಕೊಂಡು ಹೋಗಿದ್ದಾರೆ ಎಂಬುದು ಅಲ್ಲಿನ ಜನರ ಪಿಸು ಮಾತಾಗಿದೆ, ಇದರಿಂದ ಜೆಜೆಎಂ ಕಾಮಗಾರಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಇದರ ಸಲುವಾಗಿ ಗ್ರಾಮದ ಜನರು ಹಲವು ಬಾರಿ ಇದರ ಬಗ್ಗೆ ತಿಳಿಸಿದರು ಯಾವೊಬ್ಬ ಅಧಿಕಾರಿಯೂ ಇದಕ್ಕೆ ಸ್ಪಂದಿಸುತ್ತಿಲ್ಲ, ತಳ್ಳಿಕೇರೆ ಗ್ರಾಮದ ಜನರು ಜೆಜೆಎಂ ಕಾಮಗಾರಿ ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಇದರಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರಾದ ವೀರೇಶ ನಾಗರಬೇಂಚಿ ಹಾಗೂ ಇಂಜಿನಿಯರ್ ಆದ ಕಾಶಿರಾಯ್ ನಾಯಕ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರ ಮೇಲೆ ಸೂಕ್ತ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಗ್ರಾಮದ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು, ಹಾಗೂ ತಳ್ಳಿಕೆರೆ ಗ್ರಾಮದ ಜನರಿಗೆ ನೀರಿನ ಸೌಲಭ್ಯ ಒದಗಿಸಿ ಕೊಡಬೇಕು.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

20 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago