Latest

ನಿರ್ಲಕ್ಷ್ಯದ ಆರೋಪ: ವಿನೋಬನಗರ ಠಾಣೆಯ ಇನ್‌ಸ್ಪೆಕ್ಟರ್ ಚಂದ್ರಕಲಾ ಅಮಾನತು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ, ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.‌

ಈ ಕ್ರಮಕ್ಕೆ ಕಾರಣವಾದದ್ದು, ಇತ್ತೀಚೆಗೆ ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ವಿನೋಬನಗರ ಠಾಣೆಗೆ ಅಚಾನಕ್ ಭೇಟಿ ನೀಡಿದ ಸಂದರ್ಭದಲ್ಲಿ, ಇನ್‌ಸ್ಪೆಕ್ಟರ್ ಚಂದ್ರಕಲಾ ಅವರು ಅಪೇಕ್ಷಿತ ರೀತಿಯಲ್ಲಿ ಸ್ಪಂದಿಸದಿರುವುದು ಹಾಗೂ ಇಲಾಖೆಯ ಕರ್ತವ್ಯ ಪಾಲನೆಗೆ ನಿರ್ಲಕ್ಷ್ಯ ವಹಿಸಿದ್ದಾರನ್ನುವೇ ಆಗಿದೆ.

ವಿಭಾಗದ ತನಿಖೆಯಲ್ಲಿ‌ ಚಂದ್ರಕಲಾ ಅವರು ದಾಖಲೆ ನಿರ್ವಹಣೆಯಲ್ಲಿ ಲೋಪವಿರುವುದು, ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ಕಾಪಾಡದೇ ಇದ್ದುದು ಬೆಳಕಿಗೆ ಬಂದಿದೆ. ಹಿರಿಯರು ಠಾಣೆಗೆ ಬಂದಾಗ ಸ್ಥಳದಲ್ಲಿಯೇ ಸರಿಯಾದ ಮಾಹಿತಿ ನೀಡದೇ, ತಮ್ಮ ಕರ್ತವ್ಯದತ್ತ ನಿರಾಸಕ್ತಿಯನ್ನು ತೋರಿದ್ದಾರೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ, ಇನ್‌ಸ್ಪೆಕ್ಟರ್ ಚಂದ್ರಕಲಾ ಅವರನ್ನು ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಅಮಾನತು ಮಾಡುವುದಾಗಿ ಎಸ್‌ಪಿ ಮಿಥುನ್ ಕುಮಾರ್ ಆದೇಶಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯಲಿದೆ.

ಕಾನೂನು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ನಂಬಿಕೆಯನ್ನು ಉಳಿಸಿ ಕಾಪಾಡಲು ಈ ಕ್ರಮ ಅಗತ್ಯವಾಯಿತೆಂಬ ಅಭಿಪ್ರಾಯವನ್ನು ಪೊಲೀಸ್ ಇಲಾಖೆ ಹೊರಹಾಕಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

16 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

16 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago