ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ, ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕ್ರಮಕ್ಕೆ ಕಾರಣವಾದದ್ದು, ಇತ್ತೀಚೆಗೆ ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ವಿನೋಬನಗರ ಠಾಣೆಗೆ ಅಚಾನಕ್ ಭೇಟಿ ನೀಡಿದ ಸಂದರ್ಭದಲ್ಲಿ, ಇನ್ಸ್ಪೆಕ್ಟರ್ ಚಂದ್ರಕಲಾ ಅವರು ಅಪೇಕ್ಷಿತ ರೀತಿಯಲ್ಲಿ ಸ್ಪಂದಿಸದಿರುವುದು ಹಾಗೂ ಇಲಾಖೆಯ ಕರ್ತವ್ಯ ಪಾಲನೆಗೆ ನಿರ್ಲಕ್ಷ್ಯ ವಹಿಸಿದ್ದಾರನ್ನುವೇ ಆಗಿದೆ.
ವಿಭಾಗದ ತನಿಖೆಯಲ್ಲಿ ಚಂದ್ರಕಲಾ ಅವರು ದಾಖಲೆ ನಿರ್ವಹಣೆಯಲ್ಲಿ ಲೋಪವಿರುವುದು, ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ಕಾಪಾಡದೇ ಇದ್ದುದು ಬೆಳಕಿಗೆ ಬಂದಿದೆ. ಹಿರಿಯರು ಠಾಣೆಗೆ ಬಂದಾಗ ಸ್ಥಳದಲ್ಲಿಯೇ ಸರಿಯಾದ ಮಾಹಿತಿ ನೀಡದೇ, ತಮ್ಮ ಕರ್ತವ್ಯದತ್ತ ನಿರಾಸಕ್ತಿಯನ್ನು ತೋರಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ, ಇನ್ಸ್ಪೆಕ್ಟರ್ ಚಂದ್ರಕಲಾ ಅವರನ್ನು ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಅಮಾನತು ಮಾಡುವುದಾಗಿ ಎಸ್ಪಿ ಮಿಥುನ್ ಕುಮಾರ್ ಆದೇಶಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯಲಿದೆ.
ಕಾನೂನು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ನಂಬಿಕೆಯನ್ನು ಉಳಿಸಿ ಕಾಪಾಡಲು ಈ ಕ್ರಮ ಅಗತ್ಯವಾಯಿತೆಂಬ ಅಭಿಪ್ರಾಯವನ್ನು ಪೊಲೀಸ್ ಇಲಾಖೆ ಹೊರಹಾಕಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…