ಬಳ್ಳಾರಿ (ಆ.3): ಬಳ್ಳಾರಿ ನಗರದ ಐಟಿಐ ಮೈದಾನದಲ್ಲಿ ಶನಿವಾರ ಸಂಜೆಯ ವೇಳೆ ಘಟಿಸಿದ ಭಯಾನಕ ದಾಳಿ ಇದೀಗ ನಗರದಲ್ಲಿ ಆತಂಕ ಮೂಡಿಸಿದೆ. ತಮ್ಮಲ್ಲದ ಫೋಟೋವೊಂದನ್ನು ವಾಟ್ಸಾಪ್ ಸ್ಟೇಟಸ್ನಲ್ಲಿ ಹಾಕಿದ್ದ ಕಾರಣಕ್ಕಾಗಿ, ದೊಡ್ಡಬಸವ (19) ಎಂಬ ಯುವಕನ ಮೇಲೆ ಹತ್ತು ಜನ ವಿದ್ಯಾರ್ಥಿಗಳ ಗುಂಪು ಸಿನಿಮೀಯ ಶೈಲಿಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ದಾಳಿಗೆ ಒಳಗಾದ ಯುವಕ ಬಳ್ಳಾರಿ ನಿವಾಸಿಯಾಗಿದ್ದು, ಶಶಿಕುಮಾರ್, ಸಾಯಿಕುಮಾರ್ ಸೇರಿದಂತೆ ಇತರ ಆರೋಪಿಗಳು ಕೂಡಾ ಕಾಲೇಜು ವಿದ್ಯಾರ್ಥಿಗಳೇ ಆಗಿದ್ದಾರೆ. ಆರೋಪಿಗಳು ಬೈಕ್ನಲ್ಲಿ ಬಂದು ಯುವಕನನ್ನು ಎಳೆದೊಯ್ದು ಮೈದಾನದಲ್ಲಿ ಹೊಡೆತದ ಅಮಾನವೀಯ ಝಳಕ್ಕೆ ಗುರಿಯಾಗಿಸಿದ್ರು. ಕ್ರಿಕೆಟ್ ಬ್ಯಾಟ್ಗಳು, ಲೆದರ್ ಬೆಲ್ಟ್ಗಳು, ಮತ್ತು ಕಾಲು-ಕೈಗಳಿಂದ ಹಲ್ಲೆ ನಡೆಸಿದ ಪರಿಣಾಮ, ದೊಡ್ಡಬಸವನ ತುಟಿ, ದವಡೆ, ಎದೆ, ಬೆನ್ನು ಹಾಗೂ ಸೊಂಟ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.
ಮೂಲಗಳ ಪ್ರಕಾರ, ಘಟನೆಗೆ ಮೂಲ ಕಾರಣವೆಂದರೆ – ಒಂದು ಸಮಾರಂಭದಲ್ಲಿ ತೆಗೆದ ಅಪ್ರಾಪ್ತೆಯ ಫೋಟೋವನ್ನು ದೊಡ್ಡಬಸವ ತನ್ನ ವಾಟ್ಸಾಪ್ ಸ್ಟೇಟಸ್ಗೆ ಹಾಕಿದ್ದನು. ಇದರಿಂದ ಆಕ್ರೋಶಗೊಂಡ ಆರೋಪಿಗಳ ಗುಂಪು, ಬಾಲಕನಿಗೆ ಪಾಠ ಕಲಿಸುವ ಉದ್ದೇಶದಿಂದ ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆ ವೇಳೆ ದೊಡ್ಡಬಸವ ಕೈ ಮುಗಿದು, ಕ್ಷಮೆ ಕೇಳಿದರೂ ಆರೋಪಿ ಗುಂಪು ಯಾವ ರೀತಿಯ ದಯೆ ತೋರಿಸದೇ ನಿರ್ದಯವಾಗಿ ಥಳಿಸಿದೆ. ಗಾಯಾಳು ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಸಂಬಂಧ ಬಳ್ಳಾರಿ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿ, ಪೊಲೀಸರು ಬಂಧನೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕರಣ ತೀವ್ರವಾಗಿ ಬೆಳೆಯುತ್ತಿರುವ ಬೆನ್ನಲ್ಲೇ ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…