Latest

ಯುವಕನ ಮೇಲೆ 10 ಜನರ ಹಿಂಸಾತ್ಮಕ ದಾಳಿ : ಸ್ಟೇಟಸ್‌ನಲ್ಲಿ ಹಾಕಿದ ಫೋಟೋ ಕಾರಣ

ಬಳ್ಳಾರಿ (ಆ.3): ಬಳ್ಳಾರಿ ನಗರದ ಐಟಿಐ ಮೈದಾನದಲ್ಲಿ ಶನಿವಾರ ಸಂಜೆಯ ವೇಳೆ ಘಟಿಸಿದ ಭಯಾನಕ ದಾಳಿ ಇದೀಗ ನಗರದಲ್ಲಿ ಆತಂಕ ಮೂಡಿಸಿದೆ. ತಮ್ಮಲ್ಲದ ಫೋಟೋವೊಂದನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದ ಕಾರಣಕ್ಕಾಗಿ, ದೊಡ್ಡಬಸವ (19) ಎಂಬ ಯುವಕನ ಮೇಲೆ ಹತ್ತು ಜನ ವಿದ್ಯಾರ್ಥಿಗಳ ಗುಂಪು ಸಿನಿಮೀಯ ಶೈಲಿಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ದಾಳಿಗೆ ಒಳಗಾದ ಯುವಕ ಬಳ್ಳಾರಿ ನಿವಾಸಿಯಾಗಿದ್ದು, ಶಶಿಕುಮಾರ್, ಸಾಯಿಕುಮಾರ್ ಸೇರಿದಂತೆ ಇತರ ಆರೋಪಿಗಳು ಕೂಡಾ ಕಾಲೇಜು ವಿದ್ಯಾರ್ಥಿಗಳೇ ಆಗಿದ್ದಾರೆ. ಆರೋಪಿಗಳು ಬೈಕ್‌ನಲ್ಲಿ ಬಂದು ಯುವಕನನ್ನು ಎಳೆದೊಯ್ದು ಮೈದಾನದಲ್ಲಿ ಹೊಡೆತದ ಅಮಾನವೀಯ ಝಳಕ್ಕೆ ಗುರಿಯಾಗಿಸಿದ್ರು. ಕ್ರಿಕೆಟ್ ಬ್ಯಾಟ್‌ಗಳು, ಲೆದರ್ ಬೆಲ್ಟ್‌ಗಳು, ಮತ್ತು ಕಾಲು-ಕೈಗಳಿಂದ ಹಲ್ಲೆ ನಡೆಸಿದ ಪರಿಣಾಮ, ದೊಡ್ಡಬಸವನ ತುಟಿ, ದವಡೆ, ಎದೆ, ಬೆನ್ನು ಹಾಗೂ ಸೊಂಟ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.

ಮೂಲಗಳ ಪ್ರಕಾರ, ಘಟನೆಗೆ ಮೂಲ ಕಾರಣವೆಂದರೆ – ಒಂದು ಸಮಾರಂಭದಲ್ಲಿ ತೆಗೆದ ಅಪ್ರಾಪ್ತೆಯ ಫೋಟೋವನ್ನು ದೊಡ್ಡಬಸವ ತನ್ನ ವಾಟ್ಸಾಪ್ ಸ್ಟೇಟಸ್‌ಗೆ ಹಾಕಿದ್ದನು. ಇದರಿಂದ ಆಕ್ರೋಶಗೊಂಡ ಆರೋಪಿಗಳ ಗುಂಪು, ಬಾಲಕನಿಗೆ ಪಾಠ ಕಲಿಸುವ ಉದ್ದೇಶದಿಂದ ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆ ವೇಳೆ ದೊಡ್ಡಬಸವ ಕೈ ಮುಗಿದು, ಕ್ಷಮೆ ಕೇಳಿದರೂ ಆರೋಪಿ ಗುಂಪು ಯಾವ ರೀತಿಯ ದಯೆ ತೋರಿಸದೇ ನಿರ್ದಯವಾಗಿ ಥಳಿಸಿದೆ. ಗಾಯಾಳು ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಬಳ್ಳಾರಿ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿ, ಪೊಲೀಸರು ಬಂಧನೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕರಣ ತೀವ್ರವಾಗಿ ಬೆಳೆಯುತ್ತಿರುವ ಬೆನ್ನಲ್ಲೇ ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

12 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

12 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

22 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

23 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

23 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

23 hours ago