ಬೆಂಗಳೂರು: ಪ್ರತಿಷ್ಠಿತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅವರನ್ನು ಹೆಚ್ಎಸ್ಆರ್ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ಹೋಟೆಲ್ ಎದುರು ಗಲಾಟೆ – ಪುನಾವೃತವಾದ ಘಟನೆ
ಫೆಬ್ರವರಿ 7ರಂದು, ಬೆಂಗಳೂರಿನ ಒಂದು ಹೋಟೆಲ್ ಬಳಿ ವಿಷ್ಣು ಭಟ್ ಗಲಾಟೆ ಮಾಡಿದ್ದರೆಂದು ಮಾಹಿತಿ ದೊರಕಿದೆ. ಈ ಘಟನೆ ಮರೆತು ಹೋಗುವಷ್ಟರಲ್ಲಿಯೇ, ಫೆಬ್ರವರಿ 26ರಂದು ಅವರು ಮತ್ತೆ ಅದೇ ಹೋಟೆಲ್ ಗೆ ತೆರಳಿ, ವಿನಾಕಾರಣ ಜಗಳ ಆರಂಭಿಸಿದರು. ಈ ವೇಳೆ ಕಬ್ಬಿಣದ ವಸ್ತುವಿನಿಂದ ಹೋಟೆಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾನೂನು ಕ್ರಮ
ಹಲ್ಲೆಗೊಳಗಾದ ಹೋಟೆಲ್ ಸಿಬ್ಬಂದಿ, ತಕ್ಷಣವೇ ಹೆಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಷ್ಣು ಭಟ್ ಅವರನ್ನು ಬಂಧಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…