Latest

ಬೆಂಗಳೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ತೆರವು – ಅಭಿಮಾನಿಗಳಲ್ಲಿ ಆಕ್ರೋಶ.

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ, ಜನಪ್ರಿಯ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನ ಕೆಂಗೇರಿ ಸಮೀಪದ ಅಭಿಮಾನ್ ಸ್ಟುಡಿಯೋದಲ್ಲಿ ರಾತ್ರೋರಾತ್ರಿ ನೆಲಸಮ ಮಾಡಿರುವ ಘಟನೆ ಅಭಿಮಾನಿಗಳ ಮನಸ್ಸಿಗೆ ಭಾರೀ ಆಘಾತ ಉಂಟುಮಾಡಿದೆ.

ಸಿನಿಪ್ರೇಮಿಗಳ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಈ ಸ್ಥಳವು ಹಿರಿಯ ನಟ ದಿ. ಬಾಲಕೃಷ್ಣ ಅವರ ಕುಟುಂಬದ ಸ್ವತ್ತಿನಲ್ಲಿತ್ತು. ಸರ್ಕಾರವು ಸ್ಮಾರಕ ನಿರ್ಮಾಣಕ್ಕಾಗಿ ಒಂದು ಎಕರೆ ಭೂಮಿಯನ್ನು ಪಡೆದಿದ್ದರೂ, ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಬಾಲಕೃಷ್ಣ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನ್ಯಾಯಾಲಯದ ಆದೇಶದಂತೆ ಈ ತೆರವು ಕಾರ್ಯ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿದ ತಕ್ಷಣ, ನಿರ್ದೇಶಕ ರವಿ ಶ್ರೀವತ್ಸ ಸ್ಥಳಕ್ಕೆ ಧಾವಿಸಿ ಭಾವುಕರಾದರು. ಸಮಾಧಿ ತೆರವುಗೊಂಡ ದೃಶ್ಯ ಕಣ್ಣಾರೆ ಕಂಡ ಅವರು ಕಣ್ಣೀರು ಹಾಕಿದ್ದು, ಬಳಿಕ ಫೇಸ್‌ಬುಕ್ ಲೈವ್ ಮೂಲಕ ತಮ್ಮ ನೋವನ್ನು ಹಂಚಿಕೊಂಡರು. “ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನಡೆದ ಈ ಸ್ಥಳಕ್ಕೆ ಅಭಿಮಾನಿಗಳಿಗೆ ಅನನ್ಯ ಭಾವನಾತ್ಮಕ ನಂಟಿತ್ತು. ಈಗ ಅದು ಸಂಪೂರ್ಣವಾಗಿ ಅಳಿದುಹೋಗಿರುವುದು ನೋವು ತಂದಿದೆ,” ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಈಗಾಗಲೇ ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಗೊಂಡಿದ್ದರೂ, ಅಭಿಮಾನ್ ಸ್ಟುಡಿಯೋದಲ್ಲಿ ಅವರ ದೇಹಕ್ಕೆ ಅಂತಿಮ ವಿಧಿ ನಡೆದಿದ್ದರಿಂದ ಅಭಿಮಾನಿಗಳಿಗೆ ಈ ಸ್ಥಳದ ಪ್ರೀತಿ ಬೇರೆಮಟ್ಟದಲ್ಲಿತ್ತು. ಆದರೆ, ವರ್ಷಗಳಿಂದ ನಡೆದುಬಂದಿದ್ದ ಜಮೀನು ವಿವಾದ ಮತ್ತು ನ್ಯಾಯಾಲಯದ ಆದೇಶದಿಂದ ಸ್ಮಾರಕ ತೆರವುಗೊಳ್ಳುವುದನ್ನು ಅಭಿಮಾನಿಗಳು ಮನಸ್ಸಾರೆ ಒಪ್ಪಿಕೊಳ್ಳಲಾಗುತ್ತಿಲ್ಲ.

ಕಾನೂನಾತ್ಮಕ ಕಾರಣದಿಂದ ತೆರವು ನಡೆದಿದ್ದರೂ, ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮಹತ್ವದ ನೆನಪುಗಳನ್ನು ಹೊತ್ತಿದ್ದ ಈ ಸ್ಥಳದ ಅಳಿವು, ವಿಷ್ಣುವರ್ಧನ್ ಅಭಿಮಾನಿಗಳ ಹೃದಯದಲ್ಲಿ ಅಳಿಸಲಾಗದ ಗಾಯವಾಗಿ ಉಳಿಯಲಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago