Categories: Latest

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ ಚಿತ್ರದ ಪಕ್ಕದಲ್ಲಿ ಚಿಕನ್ ಮಂದಿ (ಚಿಕನ್ ಮತ್ತು ರೈಸ್) ಖಾದ್ಯವನ್ನು ಪ್ರದರ್ಶಿಸಿದ್ದ ಹಿನ್ನೆಲೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದುದಾಗಿ ಆರೋಪಿಸಿ ರೆಸ್ಟೋರೆಂಟ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಲಯಾಳಿಗಳ ಹೊಸ ವರ್ಷದ ಹಬ್ಬವಾದ ವಿಷು ಅಂಗವಾಗಿ, ಚೆರ್ತಲಾದ ಮನೋರಮಾ ಜಂಕ್ಷನ್ ಬಳಿ ಇರುವ ‘ಮೆಹರ್ ಮಂತಿ ಆಯಂಡ್ ಗ್ರಿಲ್ಸ್’ ರೆಸ್ಟೋರೆಂಟ್ ಹೆಸರಿನಲ್ಲಿ ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಪೋಸ್ಟರ್‌ನಲ್ಲಿ ಶ್ರೀಕೃಷ್ಣನ ಚಿತ್ರ ಮುಂದೆ ಗ್ರಿಲ್ಡ್ ಚಿಕನ್ ಹಾಗೂ ಮಂದಿ ರೈಸ್ ಇರುವ ತಟ್ಟೆಯನ್ನು ಚಿತ್ರಿಸಲಾಗಿದ್ದು, ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಯಿತು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ವಕೀಲ ಎಂ.ವಿ. ಬಿಜು ದೂರು ದಾಖಲಿಸಿದ್ದರು.

ಈ ದೂರಿನ ಆಧಾರದಲ್ಲಿ ಪೊಲೀಸರು ರೆಸ್ಟೋರೆಂಟ್ ಮಾಲೀಕ ಅರ್ಷಾದ್ ಅವರನ್ನು ಬಂಧಿಸಿದ್ದಾರೆ. ಕೋಮು ಶಾಂತಿ ಕದಡುವ ಉದ್ದೇಶ ಹಾಗೂ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಅಪರಾಧಕ್ಕೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

ವಿವಾದ ತೀವ್ರಗೊಂಡ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನ ವ್ಯವಸ್ಥಾಪಕ ಪಾಲುದಾರ ಶಮೀರ್ ಇನ್‌ಸ್ಟಾಗ್ರಾಮ್ ಮೂಲಕ ಕ್ಷಮೆಯಾಚಿಸಿದ್ದಾರೆ. “ಈ ಪೋಸ್ಟರ್ ಉದ್ದೇಶಪೂರ್ವಕವಾಗಿ ಹಂಚಲಾಗಿಲ್ಲ. ಖಾಸಗಿ ಗ್ರೂಪ್‌ನಲ್ಲಿ ಹರಿದಾಡುತ್ತಿದ್ದ ಚಿತ್ರವನ್ನು ತೆಗೆದುಹಾಕಲು ಪ್ರಯತ್ನಿಸಿದ್ದೇವೆ. ಆದರೆ ಸಂವಹನದ ಕೊರತೆಯಿಂದ ಅದು ವೈರಲ್ ಆಯಿತು. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ,” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಮುಸ್ಲಿಂ ನಾಯಕ ಉಸ್ತಾದ್ ಅನ್ಸಾರಿ ಸುಹ್ರಿ ಅವರು ಫೇಸ್‌ಬುಕ್ ವಿಡಿಯೋ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ. “ಶುಭಾಶಯ ಕೋರಬೇಕೆಂದಿಲ್ಲದಿದ್ದರೂ, ಆ ನೆಪದಲ್ಲಿ ಕೋಮುದ್ವೇಷ ಸೃಷ್ಟಿಸುವುದು ತಪ್ಪು. ಇಂತಹ ಘಟನೆಗಳು ಸಮಾಜದ ಶಾಂತಿಗೆ ಧಕ್ಕೆ ತರುತ್ತವೆ,” ಎಂದು ಅವರು ಎಚ್ಚರಿಸಿದರು.

“ಒಂದು ಸಮುದಾಯ ಗೌರವಿಸುವ ದೈವದ ಮುಂದೆ ಮಾಂಸಾಹಾರವನ್ನು ಚಿತ್ರಿಸುವುದು ತಪ್ಪು ಎಂಬ ಅರಿವು ಎಲ್ಲರಲ್ಲಿರಬೇಕು. ಇಂತಹ ಕೃತ್ಯಗಳು ಅನಾವಶ್ಯಕ ದ್ವೇಷಕ್ಕೆ ಕಾರಣವಾಗುತ್ತವೆ,” ಎಂದು ಅವರು ಹೇಳಿದರು.

ಇದೇ ವೇಳೆ ಯಾವುದೇ ಧಾರ್ಮಿಕ ನಿಂದನೆ ನಡೆದರೂ ಅದನ್ನು ಸಮಾನವಾಗಿ ಖಂಡಿಸಬೇಕು ಎಂದು ಅವರು ಒತ್ತಿ ಹೇಳಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago