Latest

ಜುಗಾರಿ ದಾಳಿ ಬಳಿಕ ಹಣದ ಬೇಡಿಕೆ ಆರೋಪ: ವಿಟ್ಲ ಎಸ್‌ಐ ಅಮಾನತು

ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ನಂತರ ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಿಟ್ಲ ಠಾಣೆಯ ಉಪನಿರೀಕ್ಷಕ (ಎಸ್‌ಐ) ಕೌಶಿಕ್ ಬಿ.ಸಿ. ಅವರನ್ನು ಅಮಾನತು ಮಾಡಲಾಗಿದೆ.

ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಗಾರಿ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಮೇರೆಗೆ ಎಸ್‌ಐ ಕೌಶಿಕ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಜುಗಾರಿ ಆಟದಲ್ಲಿ ತೊಡಗಿದ್ದ ಹಲವರು ಸ್ಥಳದಲ್ಲೇ ಪತ್ತೆಯಾಗಿದ್ದು, ಜೊತೆಗೆ ಒಂದು ಮೋಟಾರ್‌ಸೈಕಲ್ ಸಹ ವಶಕ್ಕೆ ಸಿಕ್ಕಿತ್ತು.

ಆದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾದಾಗ ಎಸ್‌ಐ ಕೌಶಿಕ್ ಅವರು ಆರೋಪಿಗಳನ್ನು ಬಂಧಿಸುವ ಬದಲು, ಬೈಕ್ ಮಾಲಿಕನಿಗೆ ಕರೆಮಾಡಿ ಠಾಣೆಗೆ ಬರಮಾಡಿದ್ದರು. ಬಳಿಕ ಮೂರನೇ ವ್ಯಕ್ತಿಯ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಘಟನೆ ಹಿನ್ನೆಲೆಯಲ್ಲಿ, ಮೇ 12ರಂದು ಇಲಾಖಾತ್ಮಕ ಶಿಸ್ತು ಕ್ರಮದಡಿಯಲ್ಲಿ ಎಸ್‌ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಆರೋಪದಿಂದ ಪೊಲೀಸ್ ಇಲಾಖೆಯ ಇಮೇಜ್ ಮಸಿ ಹೊಡೆಯುತ್ತಿರುವುದರಿಂದ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.

nazeer ahamad

Recent Posts

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

3 hours ago

ಹನಿಟ್ರ್ಯಾಪ್‌ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿಯು ಕೈಜೋಡು.! ಪಿರಿಯಾಪಟ್ಟಣದಲ್ಲಿ ಖಾಕಿ‌ಗೆ ಕಳಂಕ.

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ: ಜನರ ರಕ್ಷಣೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿಯೊಬ್ಬನೇ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ಶೋಕಾಂತಿಕ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.…

3 hours ago

“ಲೋಕಾಯುಕ್ತ ಎಸ್ಪಿ ಅಕ್ರಮ ಬೆನ್ನಲ್ಲೆ ಸಚಿವರ ಆಪ್ತ ಸಹಾಯಕ ಹೆಸರು ಬಹಿರಂಗ.!: ಕಾಂಗ್ರೆಸ್ ಸರ್ಕಾರ ಮುಜುಗರದಲ್ಲಿ”

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಲೋಕಾಯುಕ್ತ ಇಲಾಖೆಯೇ ಅಕ್ರಮಗಳಲ್ಲಿ ತೊಡಗಿದ್ದರೆ, ಜನ ಸಾಮಾನ್ಯರು ನ್ಯಾಯಕ್ಕಾಗಿ ಯಾರ ಬಳಿ ಹೋಗಬೇಕು…

4 hours ago

ಮಾಟಮಂತ್ರದ ನೆಪದಲ್ಲಿ ಕಿರುಕುಳ: ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಅರ್ಚಕ.!

ಬೆಂಗಳೂರು: ಮಾಟಮಂತ್ರ ಪರಿಹಾರದ ಹೆಸರಿನಲ್ಲಿ ಮಹಿಳೆಗೆ ಬೆತ್ತಲೆ ವೀಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಅರ್ಚಕನೋರ್ವನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿರುವ…

5 hours ago

ಬೆಳ್ತಂಗಡಿಯಲ್ಲಿ ಭಾರೀ ಮಳೆಗೆ ಮರ ಕುಸಿತ – ಸ್ಕೂಟರ್ ಓಡಿಸುತ್ತಿದ್ದ ದಂಪತಿಗೆ ಗಾಯ

ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ಭಾರೀ ಮಳೆಯ ನಡುವೆಯೇ ಸ್ಕೂಟರ್ ಮೇಲೆ ಮರ ಕುಸಿದು ಬಿದ್ದ ಪರಿಣಾಮ…

19 hours ago

ಆಟವಾಡುತ್ತಿದ್ದ 2 ವರ್ಷದ ಮಗು ಕಾಲುವೆಗೆ ಬಿದ್ದು ದುರ್ಘಟನಾತ್ಮಕ ಸಾವು

ಭಟ್ಕಳ: ತಾಯಿ-ತಂದೆಯ ಕಣ್ಣಿಗೆ ನಂಬಲಾಗದ ದುಃಖ ತರಿದ ಘಟನೆ ಭಟ್ಕಳದ ಆಝಾದ ನಗರದಲ್ಲಿ ನಡೆದಿದೆ. ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಎರಡು…

20 hours ago